ಯಾದಗಿರಿ: ನಗರದ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ₹ 5 ಸಾವಿರ ಲಂಚ ಪಡೆಯುವಾಗಸರ್ಕಾರಿ ಅಭಿಯೋಜಕ ಕೆ.ಗೋಪಾಲರಾವ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿತಾಲ್ಲೂಕಿನ ಅಬ್ಬೆತುಮಕೂರ ಗ್ರಾಮದ ವಿಶಾಲಾಕ್ಷಿ ಅವರಿಂದ ₹ 5 ಸಾವಿರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.
ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಪರ ವಕಾಲತ್ತು ಮಾಡಲುವಿಶಾಲಾಕ್ಷಿ ಅವರಿಗೆ ₹50 ಸಾವಿರ ಬೇಡಿಕೆ ಇಟ್ಟಿದ್ದರು. ಹಣ ಪಡೆಯುತ್ತಿದ್ದ ದಾಳಿ ನಡೆಸಲಾಯಿತು ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಎಸಿಬಿ ಡಿವೈಎಸ್ಪಿ ಚಂದ್ರಶೇಖರ ಪೂಜಾರಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪಂಚನಾಮೆ ಬಳಿಕ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗೋಪಾಲರಾವ್ ಈ ಮೊದಲು ಸಹಾಯಕ ಸರ್ಕಾರಿ ಅಭಿಯೋಜಕರಾಗಿದ್ದು, ಈಚೆಗೆ ಬಡ್ತಿ ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.