ADVERTISEMENT

ಯಾದಗಿರಿ: ತೋಟಗಾರಿಕೆ ಉಪನಿರ್ದೇಶಕ ಎಸಿಬಿ ಬಲೆಗೆ

₹5 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 16:16 IST
Last Updated 30 ಸೆಪ್ಟೆಂಬರ್ 2020, 16:16 IST

ಯಾದಗಿರಿ: ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣ ಬಿಡುಗಡೆ ಮಾಡಲು ₹ 5 ಸಾವಿರ ಪಡೆಯುತ್ತಿದ್ದ ಆರೋಪದ ಮೇಲೆ ತೋಟಗಾರಿಕೆಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ನಗರದ ಜಿಲ್ಲಾಡಳಿತ ಭವನದಲ್ಲಿರುವ ತೋಟಗಾರಿಕೆಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಎವರ್‌ ಗ್ರೀನ್‌ ಕಂಪನಿಯ ಸಬ್ಸಿಡಿ ಹಣ ₹1.77 ಲಕ್ಷ ಬಿಡುಗಡೆ ಮಾಡಲು ಮಲ್ಲಿಕಾರ್ಜುನ ಮೊದಲ ಕಂತಿನಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ನಂತರ ₹1 ಸಾವಿರ ಕೊಡಲು ಹೇಳಿದ್ದರು. ವಿರೂಪಾಕ್ಷ‍ಪ್ಪ ಶಿವರಾಜಪ್ಪ ಪೊಲೀಸ್‌ ಪಾಟೀಲ ಅವರಿಂದ ₹5 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ’ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.

‘ಈ ವೇಳೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ತಮ್ಮಿಂದ ತಪ್ಪಾಗಿದೆ. ಬಿಟ್ಟು ಬಿಡುವಂತೆ ಎಸಿಬಿ ಎಸ್ಪಿ ಮಹೇಶ ಮೇಘಣ್ಣವರ ಕಾಲುಮುಟ್ಟಿ ನಮಸ್ಕರಿಸಲು ಮುಂದಾಗಿದ್ದರು’ ಎಂದು ತಿಳಿದು ಬಂದಿದೆ.

ADVERTISEMENT

ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಗುರುಪಾದಪ್ಪ ಬಿರಾದಾರ, ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.