ಯಾದಗಿರಿ: ಕೊರೊನಾ ಸಂಕಷ್ಟದಲ್ಲಿ ಕೆ-ಸೆಟ್ ಪರೀಕ್ಷೆ ನಡೆಸುವುದು ಬೇಡ. ಪರೀಕ್ಷೆಯನ್ನು ಮುಂದೂಡಿ ಎಂದು ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ.ಸೈದಪ್ಪ, ಕಾರ್ಯದರ್ಶಿ ಬಿ.ಕೆ.ಸುಭಾಶ್ಚಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಎರಡು ವಾರಕ್ಕೂಹೆಚ್ಚುದಿನಗಳಿಂದ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್ಒ ನೇತೃತ್ವದಲ್ಲಿ ಹೋರಾಟ ನಿರತರಾಗಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಆನ್ಲೈನ್ ಚಳವಳಿಯಲ್ಲಿ ಪಾಲ್ಗೊಂಡಿದ್ದಾರೆ. ವಿದ್ಯಾರ್ಥಿಗಳು ಎತ್ತಿರುವ ಬೇಡಿಕೆಗಳ ಪರಿಣಾಮ ಸರ್ಕಾರ 20 ಜುಲೈ ರಂದು ಸಭೆ ಕರೆದಿದೆ. ಸಭೆಯಲ್ಲಿ ವಿದ್ಯಾರ್ಥಿಗಳ-ಪೋಷಕರ-ಶಿಕ್ಷಕರ ಹಿತದೃಷ್ಟಿಯಿಂದ ಸಿಇಟಿ ಮುಂದೂಡಬೇಕೆಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.