ಶಹಾಪುರ: ಜೆಡಿಎಸ್ ಮುಖಂಡ ಅಮೀನರಡ್ಡಿ ಪಾಟೀಲ ಯಾಳಗಿ ಅವರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಬಿಜೆಪಿ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶರಣಭೂಪಾಲರಡ್ಡಿ ನಾಯ್ಕಲ್ ಹಾಗೂ ಮಾಜಿ ಶಾಸಕ ಗುರು ಪಾಟೀಲ ಶಿರವಾಳ ಅವರು ಪಕ್ಷದ ಬಾವುಟವನ್ನು ನೀಡಿ ಬರ ಮಾಡಿಕೊಂಡರು.
ನಂತರ ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಮೀನರಡ್ಡಿ ಯಾಳಗಿ ಅವರು ಬಿಜೆಪಿ ಪಕ್ಷಕ್ಕೆ ಆಗಮಿಸುವಾಗ ಯಾವುದೇ ಷರತ್ತು ಇಲ್ಲದೆ ಬೇಷರತ್ತಾಗಿ ಆಗಮಿಸಿದ್ದಾರೆ. ಬರುವ ದಿನದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಗಮನಹರಿಸಲಾಗುವುದು. ಕಳೆದ ಚುನಾವಣೆಯಲ್ಲಿ ಶಹಾಪುರ ಮತಕ್ಷೇತ್ರದಿಂದ ಸ್ಪರ್ಧಿಸಿ 25 ಸಾವಿರಕ್ಕೂ ಹೆಚ್ಚು ಮತಪಡೆದು ಗಮನ ಸೆಳೆದಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತಸ್ಥಾನ ಮಾನ ನೀಡಲಾಗುವುದು ಎಂದರು.
ಮುಖಂಡ ಅಮೀನರಡ್ಡಿ ಪಾಟೀಲ ಯಾಳಗಿ ಮಾತನಾಡಿ, ಶಹಾಪುರ ಮತಕ್ಷೇತ್ರವನ್ನು ಕಾಂಗ್ರೆಸ್ ಮುಕ್ತ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಬಿಜೆಪಿ ಪಕ್ಷದ ಎಲ್ಲಾ ಹಿರಿಯರ ಮಾರ್ಗದರ್ಶನ ಹಾಗೂ ಸಹಕಾರದಿಂದ ಪಕ್ಷವನ್ನು ಬಲಪಡಿಸಲಾಗುವುದು ಎಂದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಜೂಗೌಡ ಉಕ್ಕಿನಾಳ, ಮುಖಂಡರಾದ ಅಮಾತೆಪ್ಪ ಕಂದಕೂರ, ಮಲ್ಲಣ್ಣ ಮಡ್ಡಿ ಸಾಹು, ಗುರು ಕಾಮಾ, ದೇವಿಂದ್ರ ನಾದ, ಮಲ್ಲಿಕಾರ್ಜುನ ಚಿಲ್ಲಾಳ, ಚಂದ್ರಶೇಖರ ಸುಬೇದಾರ, ರಾಮಚಂದ್ರ ಕಾಶಿರಾಜ, ಲಾಲ ಅಹ್ಮದ ಖುರೇಶಿ, ಮರೆಪ್ಪ ಪ್ಯಾಟಿ ಶಿರವಾಳ, ಶೇಖರ ದೊರೆ ಕಕ್ಕಸಗೇರಾ, ಚಂದ್ರಶೇಖರ ಯಾಳಗಿ, ಶ್ರೀಕಾಂತ ಸುಬೇದಾರ,ಬಸವರಾಜ ವಿಬೂತಿಹಳ್ಳಿ, ತಿರುಪತಿ ಸಗರ, ಚಂದಪ್ಪ ಸೀರಿ ಇದ್ದರು.
ಅಭಿನಂದನೆ (ಕೆಂಭಾವಿ): ಮಸ್ಕಿ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಭೇಟಿಯಾದ ಅಮೀನರೆಡ್ಡಿ ಪಾಟೀಲ ಯಾಳಗಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ ಕಟೀಲ್ ಹಾಗೂ ಸಂಸದ ಅಮರೇಶ ನಾಯಕ ಅಭಿನಂದಿಸಿದರು.
ಶಾಸಕ ರಾಜುಗೌಡ, ಮಾಜಿ ಶಾಸಕ ಗುರುಪಾಟೀಲ್ ಶಿರವಾಳ, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರಡ್ಡಿ ನಾಯ್ಕಲ್, ರಾಜಶೇಖರ ಗೂಗಲ್, ಚಂದ್ರಶೇಖರ ಸುಭೇದಾರ, ರಾಜುಗೌಡ ಉಕಿನಾಳ, ಬಬ್ಲುಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.