ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಸೌಮ್ಯ ಅವರ ಹುಟ್ಟಿದ ದಿನವನ್ನು ಹಲವಾರು ಮಂದಿ ಸೇರಿ ಸಂಭ್ರಮದಿಂದ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅಂತರ ಪಾಲನೆಯಾಗಿಲ್ಲ ಎಂದು ಕೆಲವರು ಆರೋಪಿಸುತ್ತಿದ್ದಾರೆ.
ಭಾನುವಾರ ರಾತ್ರಿಪೊಲೀಸ್ ಠಾಣೆಯಲ್ಲೇ ಪಿಎಸ್ಐ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎನ್ನಲಾದ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
‘ಕೊರೊನಾದ ಈ ಸಂದರ್ಭದಲ್ಲಿ ಅಂತರ ಪಾಲನೆ ಮಾಡದೇ ಕಾನೂನು ಪಾಲಕರೇ ಹೀಗೆ ಮಾಡಿದರೆ ಹೇಗೆ’ ಎಂದು ಸಾಮಾಜಿಕ ಕಾರ್ಯಕರ್ತಬಸವರಾಜ ಪಾಟೀಲ ಪ್ರಶ್ನಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಪ್ರತಿಕ್ರಿಯಿಸಿ, ‘ಮಾಹಿತಿ ಕೇಳಿದ್ದೇನೆ. ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.