ಯಾದಗಿರಿ: ಕೌಟುಂಬಿಕ ಸಮಸ್ಯೆಯಿಂದ ಮಹಿಳೆಯೊಬ್ಬರು ಅನ್ನದಲ್ಲಿ ವಿಷ ಬೆರೆಸಿ ಅದನ್ನು ಮಕ್ಕಳಿಗೆ ತಿನ್ನಿಸಿ, ಬಳಿಕ ತಾನೂ ಸೇವಿಸಿದ ಪರಿಣಾಮ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
ಶಹಾಪುರ ತಾಲ್ಲೂಕಿನ ಇಬ್ರಾಹಿಂಪುರ ಗ್ರಾಮದ ನಿವಾಸಿ ರಾಧಿಕಾ ಎಂಬುವವರು ಮಕ್ಕಳ ಜತೆ ಆತ್ಮಹತ್ಯೆಗೆ ಯತ್ನಿಸಿದವರು. ವಿಷಯ ತಿಳಿದ ತಕ್ಷಣ ಗ್ರಾಮಸ್ಥರು ಅವರನ್ನು ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. ಸದ್ಯ ಮಹಿಳೆ ಮತ್ತು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಂಡಿದ್ದಾರೆ.
‘ವಿಷ ಸೇವಿಸಿದವರ ಆರೋಗ್ಯ ಚೇತರಿಕೆಯಾಗುತ್ತಿದೆ. ಒಂದೆರಡು ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
‘ಘಟನೆ ಬಗ್ಗೆ ಮಹಿಳೆಯಿಂದ ಮಾಹಿತಿ ಪಡೆಯಲಾಗಿದ್ದು, ಈ ಬಗ್ಗೆ ನಿಖರವಾದ ಕಾರಣ ನೀಡಿಲ್ಲ. ಅಲ್ಲದೇ ಈ ಕುರಿತು ಯಾರೂ ದೂರು ನೀಡಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.