ADVERTISEMENT

ಯಾದಗಿರಿ | ಬಸವರಾಜ ಚಂಡ್ರಿಕಿ ನೇಮಕ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 3:34 IST
Last Updated 7 ಜುಲೈ 2020, 3:34 IST
ಯಾದಗಿರಿ ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೋಮವಾರದಂದು ಬಸವರಾಜ ಚಂಡ್ರಿಕಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು
ಯಾದಗಿರಿ ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೋಮವಾರದಂದು ಬಸವರಾಜ ಚಂಡ್ರಿಕಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು   

ಯಾದಗಿರಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಸವರಾಜಪ್ಪ ಚಂಡ್ರಿಕಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಪ್ರಾಧಿಕಾರದ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು.

ನಂತರ ಮಾತನಾಡಿದ, ಎಲ್ಲರ ಸಹಕಾರ ಹಾಗೂ ಸಲಹೆಗಳನ್ನು ನಿರೀಕ್ಷಿಸುತ್ತಿದ್ದು, ಪ್ರಾಧಿಕಾರದಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದರು.

ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ, ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ, ಸಿದ್ದಪ್ಪ ಹೊಟ್ಟಿ, ಖಂಡಪ್ಪ ದಾಸನ್, ಮೋಹನಬಾಬು, ಮಲ್ಲಣಗೌಡ ಹತ್ತಿಕುಣಿ, ಸಿದ್ದಣಗೌಡ ಕಾಡಂನೋರ, ಪ್ರಾಧಿಕಾರದ ಸದಸ್ಯರಾದ ರುದ್ರಗೌಡ ಪಾಟೀಲ್, ಶಿವಕಾಂತಮ್ಮ ಮಡ್ನಳ್ಳಿ, ಸುಭಾಶ ಮಾಳಿಕೇರಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.