ADVERTISEMENT

ಹುಣಸಗಿ: ಬಸವಸಾಗರಕ್ಕೆ ಹೆಚ್ಚಿದ ಒಳ ಹರಿವು

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 6:33 IST
Last Updated 9 ಆಗಸ್ಟ್ 2025, 6:33 IST
ಬಸವಸಾಗರ ಜಲಾಶಯದಿಂದ ನದಿಗೆ ನೀರು ಹರಿಸಲಾಯಿತು
ಬಸವಸಾಗರ ಜಲಾಶಯದಿಂದ ನದಿಗೆ ನೀರು ಹರಿಸಲಾಯಿತು   

ಹುಣಸಗಿ: ತಾಲ್ಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಅಧಿಕ ನೀರು ಹರಿದು ಬರುತ್ತಿದೆ. ಶನಿವಾರ ಸಂಜೆ 14 ಗೇಟ್‌ಗಳ ಮುಖಾಂತರ 52,700 ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ ಎಂದು ಡ್ಯಾಂ ಡಿವಿಜನ್ ಅಧಿಕಾರಿಗಳು ತಿಳಿಸಿದ್ದಾರೆ.

ಒಳಹರಿವು 50 ಸಾವಿರ ಕ್ಯುಸೆಕ್ ದಾಖಲಾಗಿದ್ದು, ಜಲಾಶಯದ ಮಟ್ಟವನ್ನು ಕಾಯ್ದುಕೊಂಡು ಹೆಚ್ಚಿನ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಲ್ಲಿ ಮತ್ತೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಶೇ 84.68 ರಷ್ಟು ಅಂದರೆ 28 ಟಿಎಂಸಿ ಅಡಿ ನೀರು ಸಂಗ್ರಹವಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT