ADVERTISEMENT

ಬಸವೇಶ್ವರ ಮೂರ್ತಿ ವಿರೂಪ: ಕ್ರಮಕ್ಕೆ ಆಗ್ರಹ

ವೀರಶೈವ ಮಹಾಸಭಾ ಯುವ ಘಟಕದಿಂದ ಬೈಕ್ ರ್‍ಯಾಲಿ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 7:38 IST
Last Updated 11 ನವೆಂಬರ್ 2020, 7:38 IST
ಯಾದಗಿರಿ ಜಿಲ್ಲಾ ವೀರಶೈವ ಮಹಾಸಭಾ ಯುವ ಘಟಕದಿಂದ ನಗರದಲ್ಲಿ ಮಂಗಳವಾರ ಬೈಕ್ ರ್‍ಯಾಲಿ ನಡೆಸಿ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು
ಯಾದಗಿರಿ ಜಿಲ್ಲಾ ವೀರಶೈವ ಮಹಾಸಭಾ ಯುವ ಘಟಕದಿಂದ ನಗರದಲ್ಲಿ ಮಂಗಳವಾರ ಬೈಕ್ ರ್‍ಯಾಲಿ ನಡೆಸಿ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು   

ಯಾದಗಿರಿ: ಜಗಜ್ಯೋತಿ ಬಸವಣ್ಣನವರ ಮೂರ್ತಿಯನ್ನು ವಿರೂಪಗೊಳಿಸಿದ ಆರೋಪಿಗಳ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವೀರಶೈವ ಮಹಾಸಭಾ ಯುವ ಘಟಕದಿಂದ ನಗರದಲ್ಲಿ ಮಂಗಳವಾರ ಬೈಕ್ ರ್‍ಯಾಲಿ ನಡೆಸಲಾಯಿತು.

ಬೆಳಗಾವಿಯಲ್ಲಿ ಶನಿವಾರ ತಡರಾತ್ರಿ ದುಷ್ಕರ್ಮಿಗಳು ಬಸವಣ್ಣ ಮೂರ್ತಿಯನ್ನು ವಿರೂಪಗಳಿಸಿರುವುದನ್ನು ವಿರೋಧಿಸಿ ಅಖಿಲ ಭಾರತ ವೀರಶೈವ ಮಹಾಸಭೆ ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಅವಿನಾಶ ಜಗನ್ನಾಥ್ ನೇತೃತ್ವದಲ್ಲಿ ಯುವಕರು ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್‍ಯಾಲಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಗುರುಮಠಕಲ್ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಜಗತ್ತಿನಲ್ಲಿ ಸಮಾನತೆ ಸಾರಿದ ಬಸವಣ್ಣನ ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ಅವಿನಾಶ ಜಗನ್ನಾಥ ಮಾತನಾಡಿ, ಬಸವೇಶ್ವರರ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ಮೂರ್ತಿಯನ್ನು ಪುನರ್ ಸ್ಥಾಪಿಸಬೇಕು. ನಿರ್ಲಕ್ಷ್ಯ ಮಾಡಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವೇಳೆ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಆರ್.ಮಹಾದೇವಪ್ಪ ಅಬ್ಬೆತುಮಕೂರು, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ.ಸಿದ್ದಪ್ಪ ಹೊಟ್ಟಿ, ನೀಲಕಂಠ ಶೀಲವಂತ, ಇಂದುಧರ ಸಿನ್ನೂರ, ರಮೇಶ ದೊಡ್ಡಮನಿ, ರಾಜು ಉಪ್ಪಿನ್, ಶರಣು ಆಶನಾಳ, ಮಂಜುನಾಥ ಜಡಿ, ಶರಣು ಇಡ್ಲೂರು, ಶಿವಾನಂದ ವಾಲಿ, ಜಗದೀಶ ಜಾಕಾ, ಅಂಬ್ರೇಷ್ ಜಾಕಾ, ಮಲ್ಲಿಕಾರ್ಜುನ ಅರುಣಿ, ನಿರಂಜನ ಸಜ್ಜನ್, ಸಚಿನ್ ಬಾಪುರೆ, ಶಿವರಾಜ ಕಲಿಕೇರಿ, ಸಿದ್ದು ಪಾಟೀಲ್, ವೀರೇಶ ದುಗನೂರ, ವೀರೇಶ ನೆಲೋಗಿ, ವಿಶ್ವನಾಥ ಕೋರಿ, ಭರತ, ಅಶೋಕ ದೇವಿಶೆಟ್ಟಿ, ಶರಣು ಪಡಶೆಟ್ಟಿ, ವಿರೇಶ ಪುಲಮಾಮಿಡಿ, ಸೋಮು ಸಾಹುಕಾರ, ಮಂಜುನಾಥ ದೋತರಬಂಡಿ, ವೀರೇಶ, ಜಗದೀಶ, ಶಂಕರಗೌಡ ಮಲ್ಹಾರ ಇದ್ದರು.

ನಂತರ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.