ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಉತ್ತಮ ಮಳೆಯಾಗಿದೆ. ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಇತ್ತು.
ಕೆಲ ಕಡೆ ಮಳೆ ಇಲ್ಲದಿದ್ದರಿಂದ ಬಿತ್ತಿರುವ ಬೀಜಕ್ಕೆ ತೇವಾಂಶದ ಕೊರತೆಯಾಗಿತ್ತು. ಇದು ರೈತರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಮಳೆಯಿಂದ ಸಮಸ್ಯೆ ನಿವಾರಣೆಯಾದಂತೆ ಆಗಿದೆ.
ನಗರದ ಗಾಂಧಿ ವೃತ್ತದ ಸಮೀಪ ತಗ್ಗು ಪ್ರದೇಶದಲ್ಲಿ ನೀರು ನಿಂತಿತು. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಯಿತು. ಸುರಪುರದಲ್ಲಿ ಸಾಧಾರಣ ಮಳೆಯಾಗಿದೆ. ಶಹಾಪುರ ದಲ್ಲಿ ಕೆಲ ಹೊತ್ತು ಉತ್ತಮ ಮಳೆಯಾ ಗಿದ್ದು, ಸೈದಾಪುರ, ಗುರುಮಠಕಲ್ನಲ್ಲಿ ತುಂತುರು ಮಳೆಯಾಗಿದೆ. ಅಲ್ಲಿಪುರ, ಹತ್ತಿಕುಣಿ ಗ್ರಾಮದಲ್ಲಿ ಮಳೆ ಸುರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.