ADVERTISEMENT

ಬೈಕ್– ಟಿಪ್ಪರ್ ಡಿಕ್ಕಿ: ಮೂವರಿಗೆ ಗಾಯ

ಮಾನವೀಯತೆ ಮೆರೆದ ಯಾದಗಿರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 18 ಜುಲೈ 2020, 16:05 IST
Last Updated 18 ಜುಲೈ 2020, 16:05 IST
ಯರಗೋಳ ಸಮೀಪದ ವೆಂಕಟೇಶನಗರ ಬಳಿಯ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಯಾದಗಿರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸಣ್ಣಗೌಡ ಪಾಟೀಲ ಯಡಿಯಾಪುರ
ಯರಗೋಳ ಸಮೀಪದ ವೆಂಕಟೇಶನಗರ ಬಳಿಯ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಯಾದಗಿರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸಣ್ಣಗೌಡ ಪಾಟೀಲ ಯಡಿಯಾಪುರ   

ಯರಗೋಳ: ವೆಂಕಟೇಶನಗರ ಬಳಿಯ ಯಾದಗಿರಿ–ವಾಡಿ ಮುಖ್ಯ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೈಕ್ ಹಾಗೂ ಟಿಪ್ಪರ್ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರು ಚಿತ್ತಾಪುರ ತಾಲ್ಲೂಕಿನ ಸೂಗುರ (ಎನ್) ಗ್ರಾಮದವರು.

ಇಬ್ಬರು ಮಹಿಳೆಯರು ಮತ್ತು ಯುವಕ ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ನರಳಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಕಲಬುರ್ಗಿಯಿಂದ ಯಾದಗಿರಿಗೆ ತೆರಳುತ್ತಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಅವರು ಗಾಯಾಳುಗಳನ್ನು ಗಮನಿಸಿ ಅವರಿಗೆ ನೀರು ಕುಡಿಸಿ ಉಪಚರಿಸಿದ್ದಾರೆ. ನಂತರ ಆರೋಗ್ಯಾಧಿಕಾರಿಗಳೊಂದಿಗೆ ಮಾತನಾಡಿ ಆಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.