ADVERTISEMENT

ನಾಲ್ವರು ಶ್ರೀಗಳು ಸೇರಿ ಹಲವರಿಂದ ರಕ್ತದಾನ

ಮಿತ್ರ ಚಾರಿಟಬಲ್ ಟ್ರಸ್ಟ್‌ ಯುವಕರ ಕಾರ್ಯ ಶ್ಲಾಘನೀಯ: ಸಿದ್ಧಲಿಂಗ ಶ್ರೀ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 16:03 IST
Last Updated 2 ಅಕ್ಟೋಬರ್ 2020, 16:03 IST
ಸೈದಾಪುರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಪಂಚಮ ಸಿದ್ಧಲಿಂಗ ಸ್ವಾಮಿಗಳು ಸೇರಿದಂತೆ ಇತರ ಸ್ವಾಮೀಜಿಗಳು ರಕ್ತದಾನ ಮಾಡಿದರು
ಸೈದಾಪುರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಪಂಚಮ ಸಿದ್ಧಲಿಂಗ ಸ್ವಾಮಿಗಳು ಸೇರಿದಂತೆ ಇತರ ಸ್ವಾಮೀಜಿಗಳು ರಕ್ತದಾನ ಮಾಡಿದರು   

ಸೈದಾಪುರ: ಕೊರೊನಾದಂತಹ ಕಠಿಣ ಪರಸ್ಥಿತಿಯಲ್ಲಿಯೂ ಮಿತ್ರ ಚಾರಿಟಬಲ್ ಟ್ರಸ್ಟ್‌ನ ಯುವಕರು ಶ್ಲಾಘನೀಯ ಕೆಲಸ ಮಾಡಿದ್ದಾರೆ ಎಂದು ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದ ಪೀಠಾಧಿಪತಿ ಪಂಚಮ ಸಿದ್ಧಲಿಂಗ ಸ್ವಾಮಿಗಳು ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರು ಶಾಸ್ತ್ರಿ ಅವರ ಜಯಂತಿಯ ಅಂಗವಾಗಿ ಮಿತ್ರ ಚಾರಿಟಬಲ್ ಟ್ರಸ್ಟ್ (ರಿ) ಹಾಗೂ ಡಾ.ಸುರಗಿಮಠ ರಕ್ತ ನಿಧಿ ಕೇಂದ್ರ ಯಾದಗಿರಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸತ್ಯ ಮತ್ತು ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಹಾಗೂ ಪ್ರಧಾನಿಯಾಗಿ ದಕ್ಷ ಹಾಗೂ ಪ್ರಾಮಾಣಿಕ ಸೇವೆಯಿಂದ ಆದರ್ಶ ವ್ಯಕ್ತಿತ್ವ ಹೊಂದಿದ್ದ ಲಾಲ್ ಬಹಾದ್ದರೂ ಶಾಸ್ತ್ರಿ ಅವರಂತಹ ಮಹಾನ್ ನಾಯಕರ ನಿಷ್ಕಳಂಕ ವ್ಯಕ್ತಿತ್ವ ಅನುಕರಣೀಯ ಎಂದರು.

ADVERTISEMENT

ಡಾ.ಎಸ್.ಆರ್. ಸುರಗಿಮಠ ರಕ್ತದಾನದಿಂದ ಆಗುವ ಉಪಯೋಗಗಳ ಬಗ್ಗೆ ತಿಳಿಸಿದರು. ಇದಕ್ಕೂ ಮುಂಚೆ ಕೊರೊನಾ ವಾರಿಯರ್ಸ್‌ ಆಗಿ ಕಾರ್ಯ ನಿರ್ವಹಿಸಿದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಶಿಬಿರದಲ್ಲಿ ವಿಶೇಷವಾಗಿ ನಾಲ್ವರು ಸ್ವಾಮಿಜಿಗಳು, ಯುವಕರು, ವಯಸ್ಕರು ಸೇರಿದಂತೆ ಹಲವು ಜನರು ರಕ್ತದಾನ ಮಾಡಿದರು.

ವಿಜಯಕುಮಾರ ದೇವರು, ಸಿದ್ಧರಾಮ ದೇವರು, ಚಂದ್ರಶೇಖರ ದೇವರು, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮಣ್ಣಗೌಡ ಕ್ಯಾತ್ನಾಳ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದಪ್ಪ ಕಾವಲಿ ಬಾಲಚೇಡ, ಆಯುಷ್ ವೈದ್ಯಾಧಿಕಾರಿ ಡಾ.ಪ್ರಮೋದ ಕುಲಕರ್ಣಿ, ಪಿಎಸ್‍ಐ ಸುವರ್ಣ ಮಾಲಶಟ್ಟಿ, ನಿವೃತ್ತ ಮುಖ್ಯಶಿಕ್ಷಕ ಬಿ.ಬಿ ಹೆಬ್ಬಾಳೆ, ಲಿಂಗಾರೆಡ್ಡಿ ನಾಯಕ, ಶಿವರಾಜಪ್ಪ ಮೇದಾ, ಟ್ರಸ್ಟ್‌ ಅಧ್ಯಕ್ಷ ರಾಘವೇಂದ್ರ ಕಲಾಲ್ ಹಾಗೂ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.