ಯಾದಗಿರಿ: ಬರ ಪರಿಶೀಲನೆಗೆ ಜಿಲ್ಲೆಗೆ ಆಗಮಿಸಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ದಿಢಿರನೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿದ ಅವರು, ರೋಗಿಗಳ ಯೋಗ ಕ್ಷೇಮ ವಿಚಾರಿಸಿದರು.
ತುರ್ತು ಚಿಕಿತ್ಸಾ ಘಟಕದಲ್ಲಿ ವೈದ್ಯರು ಇನ್ನೂ ಬಾರದಿರುವುದನ್ನು ಕಂಡ ಗರಂ ಆದರು. ತಕ್ಷಣ ವೈದ್ಯರು ಬಂದು ಸಮಜಾಯಿಷಿ ನೀಡಿದರು.
ನಂತರ ಡಯಾಲಿಸಿಸ್ ಘಟಕಕ್ಕೆ ಭೇಟಿ ನೀಡಿದರು. ಆ ಘಟಕಕ್ಕೆ ಬೀಗ ಹಾಕಲಾಗಿತ್ತು. ನಂತರ ವಿವಿಧ ವಾರ್ಡ್ಗಳನ್ನು ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.