ಯಾದಗಿರಿ:‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಎದುರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಯೂರಿದ್ದಾರೆ. ಅಧಿಕಾರಕ್ಕಾಗಿ ಯಡಿಯೂರಪ್ಪ ಏನು ಬೇಕಾದರೂ ಮಾಡುತ್ತಾರೆ. ಆದರೆ, ಅಭಿವೃದ್ಧಿ ವಿಚಾರದಲ್ಲಿ ಸೇಡಿನ ರಾಜಕಾರಣ ಮಾಡುತ್ತ ಕಾಲಹರಣ ಮಾಡುತ್ತಾರೆ’ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಆರೋಪಿಸಿದರು.
‘75 ವರ್ಷ ತುಂಬಿರುವ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಕುರ್ಚಿಯಿಂದ ಯಾವಾಗ ಕೆಳಗಿಳಿಸುತ್ತಾರೆ ಎಂಬ ಭಯ ಶುರುವಾಗಿದೆ. ಅವರ ಅಂತ್ಯ ಕಾಲ ಸನ್ನಿಹಿತವಾಗಿದೆ’ ಎಂದು ಕುಟುಕಿದರು.
‘ಯಡಿಯೂರಪ್ಪ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಗುರುಮಠಕಲ್ ಕ್ಷೇತ್ರಕ್ಕೆ
ನೀಡಲಾಗಿದ್ದ ₹ 4.5 ಕೋಟಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಪಟ್ಟಣದ ಖಾಸಾ ಮಠಕ್ಕೆ ನೀಡಿದ್ದ
₹ 50 ಲಕ್ಷ ಅನುದಾನ ಹಿಂಪಡೆದಿದ್ದಾರೆ’ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.