ADVERTISEMENT

ಸಿಎಂ ಪ್ರವಾಸದ ವೇಳೆ ಜೆಡಿಎಸ್‌ಗೆ ಜೈಕಾರ: ಶರಣಗೌಡ ಸೇರಿ ಹಲವರ ವಿರುದ್ಧ ಕೇಸು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2019, 19:22 IST
Last Updated 6 ಅಕ್ಟೋಬರ್ 2019, 19:22 IST
   

ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡು ಸಂಜೆ ಜಿಲ್ಲಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ನಗರದ ಸುಭಾಷ್‌ ವೃತ್ತದಲ್ಲಿ ಜೆಡಿಎಸ್‌ಗೆ ಜೈ ಎಂದು ಕೂಗಿ ಭದ್ರತೆಗೆ ಅಡ್ಡಿಪಡಿಸಿದ ಆರೋಪದ ಮೇಲೆ 15ರಿಂದ 20 ಮಂದಿ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಜೆಡಿಎಸ್‌ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಅವರ ಒಳಸಂಚಿನಿಂದ ಶಿವ ಕುಮಾರ್ ಹಾಗೂ ಇತರರು ಮುಖ್ಯಮಂತ್ರಿಯವರ ಭದ್ರತೆಗೆ ಅಡ್ಡಿಪಡಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದುನಗರಸಭೆ ಸದಸ್ಯ ಹನಮಂತ್ ಇಟಗಿ ದೂರು ನೀಡಿದ್ದರು. ‘ಶರಣಗೌಡ ಕಂದಕೂರ ಹಾಗೂಶಿವಕುಮಾರ್ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT