ಯಾದಗಿರಿ: ಕಳೆದ ಮೇ 5 ರಂದು ಆರಂಭವಾಗಿರುವ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ., ಅವರು ಶುಕ್ರವಾರ ನಗರದ ಗಾಂಧಿ ನಗರ ತಾಂಡಾ, ಅಂಬೇಡ್ಕರ್ ನಗರ, ಕೋಟಗೇರಾ ವಾಡಾಕ್ಕೆ ಭೇಟಿ ನೀಡಿದರು.
ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ನಡೆದಿರುವ ಈ ಸಮೀಕ್ಷೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ನಿರಂತರ ಮಾಹಿತಿ ಪಡೆಯುತ್ತಿರುವ ಜಿಲ್ಲಾಧಿಕಾರಿ ಅವರು ಸಮೀಕ್ಷಾ ಸ್ಥಳಕ್ಕೆ ತಾವೇ ಖುದ್ದು ಭೇಟಿ ನೀಡುವ ಮೂಲಕ ಸಮೀಕ್ಷೆಯಲ್ಲಿರುವ ಸಿಬ್ಬಂದಿ ಮತ್ತು ಜನರಿಗೆ ಅಗತ್ಯ ಹೆಚ್ಚಿನ ಮಾಹಿತಿ ನೀಡಿದರು.
ಈ ವೇಳೆ ಗಾಂಧಿ ನಗರದಲ್ಲಿ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ದಾಖಲೆ ಪರಿಶೀಲಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ, ತಹಶೀಲ್ದಾರ್ ಸುರೇಶ ಅಂಕಲಗಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.