ADVERTISEMENT

ಯಾದಗಿರಿ | ಹೆರಿಗೆ ವೇಳೆ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2024, 15:57 IST
Last Updated 4 ಫೆಬ್ರುವರಿ 2024, 15:57 IST
ಮಗು ( ಸಾಂದರ್ಭಿಕ ಚಿತ್ರ)
ಮಗು ( ಸಾಂದರ್ಭಿಕ ಚಿತ್ರ)   

ಯಾದಗಿರಿ: ತಾಲ್ಲೂಕಿನ ಹೊನಗೇರಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಸ್ಥರು ಆರೋಪಿಸಿದ್ದಾರೆ.

ತೀವ್ರ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಹನುಮಂತಿಗೆ ಚಿಕಿತ್ಸೆ ನೀಡಲು ವೈದ್ಯರೇ ಆಸ್ಪತ್ರೆಯಲ್ಲಿ ಇರಲಿಲ್ಲ. ಹೀಗಾಗಿ ಸ್ಟಾಫ್‌ ನರ್ಸ್‌, ಡಿ‌ ಗ್ರೂಪ್ ಸಿಬ್ಬಂದಿ ಗರ್ಭಿಣಿ ಹೆರಿಗೆ ಮಾಡಿಸಲು ಮುಂದಾಗಿದ್ದರು. ತಾಯಿ ಗರ್ಭದಿಂದ ಮಗುವಿನ ಕಾಲು ಹೊರಗೆ ಬಂದು ಅರ್ಧಗಂಟೆ ಬಳಿಕ ಹೆರಿಗೆಯಾಗಿದೆ. ಹೆರಿಗೆಯಾದ ಬಳಿಕ ನರಳಾಡಿ ಹಸುಗೂಸು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಗರ್ಭಿಣಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ಯಾವುದೇ ದುರ್ಘಟನೆ ಆಗುತ್ತಿರಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿದ ಯಾದಗಿರಿ ತಾಲ್ಲೂಕಿನ ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ‘ಡಾ.ಖಾಜಾ ಬೇಗಂ ತರಬೇತಿಗಾಗಿ ಯಾದಗಿರಿಗೆ ಬಂದಿದ್ದರು. ವರದಿಗಳು ನಾರ್ಮಲ್‌ ಇದ್ದ ಕಾರಣ ಹೀಗಾಗಿ ಸ್ಟಾಫ್‌ ನರ್ಸ್‌ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಆದರೆ, ಮೊದಲು ಶಿಶು ಕಾಲು ಹೊರಗೆ ಬಂದಿದೆ. ನಂತರ ಉಸಿರಾಟದ ತೊಂದರೆಯಿಂದ ಶಿಶು ಮೃತಪಟ್ಟಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.