ADVERTISEMENT

ಯಾದಗಿರಿ: ಹಾಲಿ, ಮಾಜಿ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 6:04 IST
Last Updated 25 ಮಾರ್ಚ್ 2023, 6:04 IST
ಶರಣಬಸಪ್ಪಗೌಡ ದರ್ಶನಾಪುರ,
ಶರಣಬಸಪ್ಪಗೌಡ ದರ್ಶನಾಪುರ,   

ಯಾದಗಿರಿ: ಜಿಲ್ಲೆಯ ಶಹಾಪುರ, ಸುರಪುರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ.

ಶಹಾಪುರದ ಹಾಲಿ‌ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸುರಪುರದ ಮಾಜಿ‌ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಹೆಸರು ಇದೆ.

ಎರಡು ಕ್ಷೇತ್ರಗಳಲ್ಲಿ ಹಾಲಿ, ಮಾಜಿ ಶಾಸಕರು ತಲಾ ಒಬ್ಬೊಬ್ಬರು ಮಾತ್ರ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಇದರಿಂದ ಇದು ನಿರೀಕ್ಷಿತವೂ ಆಗಿತ್ತು.‌

ADVERTISEMENT

ಯಾದಗಿರಿ, ಗುರುಮಠಕಲ್ ಗೆ ಘೋಷಿಸಿಲ್ಲ: ಜಿಲ್ಲೆಯಲ್ಲಿ ನಾಲ್ಕು ಮತಕ್ಷೇತ್ರಗಳಿವೆ. ಇದರಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಎರಡು ಮತಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಣೆ ಮಾಡಲಾಗಿದೆ.

ಇನ್ನುಳಿದ ಎರಡು ಮತಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದರಿಂದ ಯಾದಗಿರಿ, ಗುರುಮಠಕಲ್ ಮತಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ಈಗಾಗಲೇ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಪ್ರಚಾರ ಆರಂಭಿಸಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.