ಯಾದಗಿರಿ: ಕೊರೊನಾ ವಾರಿಯರ್ಸ್ಗಳಿಗೆ ಈ ಹಿಂದೆ ಇದ್ದ ₹50 ಲಕ್ಷ ವಿಮಾ ಕವಚವನ್ನು ಅಂತ್ಯಗೊಳಿಸಿರುವುದಾಗಿ ಪ್ರಕಟಣೆ ಹೊರಡಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮವನ್ನು ಎಐಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ರಾಜ್ಯ ಘಟಕದ ಅಧ್ಯಕ್ಷ ಕೆ.ಸೋಮಶೇಖರ್ ಅವರು, ಕೊರೊನಾ ಎರಡನೇ ಅಲೆ ತೀವ್ರ ಸ್ಪರೂಪದ್ದಾಗಿದ್ದು, ಅಧಿಕ ಸಾವುಗಳಿಗೆ ಕಾರಣವಾಗುತ್ತಿದೆ. ಇಂಥ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಹಗಲು-ರಾತ್ರಿ ದುಡಿಯುತ್ತಿರುವ ಇವರಿಗೆ ಕೇಂದ್ರ ಸರ್ಕಾರ ಈಗ ಆಘಾತ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನರ ಜೀವ ಉಳಿಸಲು ತಮ್ಮ ಜೀವ ಪಣಕ್ಕಿಟ್ಟ ಆರೋಗ್ಯ ಕಾರ್ಯಕರ್ತರು ಮತ್ತು ಇವರ ಕುಟುಂಬಕ್ಕೆ ಕನಿಷ್ಠ ಕೃತಜ್ಞತೆ ನೀಡದ ಸರ್ಕಾರ ಇದಾಗಿದೆ. ಕೊರೊನಾ ಸೇನಾನಿಗಳಾದ ಇವರ ಸೇವೆಯನ್ನು ಗೌರವಿಸಿ ₹50 ಲಕ್ಷ ವಿಮೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಕೊರೊನಾ ವಿಶೇಷ ಸೇವೆಗಾಗಿ ಈ ಹಿಂದೆ ನೀಡುತ್ತಿದ್ದ ಮಾಸಿಕ ₹1,000 ವಿಶೇಷ ಪ್ರೋತ್ಸಾಹ ಧನವನ್ನು ₹5,000ಕ್ಕೆ ಹೆಚ್ಚಿಸಬೇಕೆಂದು
ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.