ADVERTISEMENT

ಹಲ್ಲೆ ಆರೋಪಿಗೆ 6 ತಿಂಗಳ ಕಾರಾಗೃಹ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 15:00 IST
Last Updated 20 ಮಾರ್ಚ್ 2019, 15:00 IST

ಯಾದಗಿರಿ: ವ್ಯಕ್ತಿಯ ಮೇಲೆ ಗಂಭೀರ ಹಲ್ಲೆ ನಡೆಸಿ ಗಾಯಗೊಳಿಸಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆ ನಡೆಸಿ ಹೆಚ್ಚುವರಿ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ ಆರೋಪಿಗೆ ಆರು ತಿಂಗಳು ಕಾರಾಗೃಹ ಶಿಕ್ಷೆ ಮತ್ತು ₹ 6 ಸಾವಿರ ದಂಡು ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

ಸೈದಾಪುರ ಹೋಬಳಿಯ ನೀಲನಹಳ್ಳಿ ಗ್ರಾಮದ ಆರೋಪಿ ಮಲ್ಲಪ್ಪ ಶಿಕ್ಷೆಗೆ ಗುರಿಯಾಗಿದ್ದಾರೆ. ವ್ಯಕ್ತಿ ಮೇಲೆ ಮಂಜಪ್ಪ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಬಂಧಿಸಿದಂತೆ ತಾಲ್ಲೂಕಿನ ಸೈದಾಪುರ ಪೊಲೀಸ್ ಠಾಣೆಯಲ್ಲಿ ಜನವರಿ, 2017ರಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT