ADVERTISEMENT

ಹಸೆಮಣೆ ಏರಬೇಕಿದ್ದ ಯುವಕನಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 8:13 IST
Last Updated 9 ಜುಲೈ 2020, 8:13 IST
   

ಯಾದಗಿರಿ: ಬೆಂಗಳೂರಿನಿಂದ ಜಿಲ್ಲೆಗೆ ಬಂದಿದ್ದ ಮದುಮಗನಿಗೆ ಕೋವಿಡ್ ದೃಢಪಟ್ಟಿದ್ದು, ಹಸೆಮಣೆ ಏರುವ ಮುನ್ನವೇ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜುಲೈ 13ಕ್ಕೆ ನಿಗದಿಯಾಗಿದ್ದ ಮದುವೆ ಮುಂದೂಡಲಾಗಿದೆ.

ಶಹಾಪುರ ತಾಲ್ಲೂಕಿನ ಗ್ರಾಮವೊಂದರ ಯುವಕ ಮದುವೆಗೆಂದೇ ಜೂನ್‌ 19ಕ್ಕೆ ಬೆಂಗಳೂರಿನಿಂದ ಮನೆಗೆ ಮರಳಿದ್ದು, ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ತೀವ್ರ ಶೀತ ಕಾಡುತ್ತಿದ್ದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಗಂಟಲು ದ್ರವದ ಪರೀಕ್ಷೆ ನಡೆಸಿದಾಗ, ಕೋವಿಡ್ ತಗುಲಿರುವುದು ದೃಢಪಟ್ಟಿತು.

ಮದುವೆ ಕೆಲಸಕ್ಕಾಗಿ ಯುವಕ ವಿವಿಧೆಡೆ ಓಡಾಡಿದ್ದು, ಮದುವೆ ಮನೆ ಸೇರಿದಂತೆ ಗ್ರಾಮದಲ್ಲಿ ಈಗ ಕೊರೊನಾ ಭೀತಿ ಆವರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.