ಯಾದಗಿರಿ: ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ನಗರದ ವಿಬಿಆರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಶಿಲ್ಡ್ಲಸಿಕೆ ನೀಡಲಾಯಿತು.
ಖಾಸಗಿ ಆಸ್ಪತ್ರೆಯ 290 ಸಿಬ್ಬಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. 176 ಮಂದಿ ಲಸಿಕೆ ಪಡೆದಿದ್ದಾರೆ. ಇದು ಜಿಲ್ಲೆಯಲ್ಲಿಯೇ ಶುಕ್ರವಾರ ನೀಡಿದ ಅತಿ ಹೆಚ್ಚಿನ ಲಸಿಕೆ ನೀಡಿಕೆಯಾಗಿದೆ.
ಲಸಿಕೆ ಪಡೆದು ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಮಾತನಾಡಿ, ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮಗಳು ಅಥವಾ ಸಮಸ್ಯೆ ಉಂಟಾಗುವುದಿಲ್ಲ. ದೇಶದಲ್ಲಿಯೇ ಅಭಿವೃದ್ಧಿಪಡಿಸಿದ ಲಸಿಕೆ ಇದಾಗಿದ್ದು, ದೇಶದ ವೈಜ್ಞಾನಿಕ ಕ್ಷೇತ್ರ ಹಾಗೂ ವೈದ್ಯಕೀಯ ವಿಜ್ಞಾನ ತುಂಬಾ ಅಭಿವೃದ್ಧಿ ಸಾಧಿಸಿದೆ ಎಂದರು.
ಆದರಂತೆ ಹಳೆ ಜಿಲ್ಲಾಸ್ಪತ್ರೆಯಲ್ಲಿಯೂ 199 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. 115 ಜನರಿಗೆ ಲಸಿಕೆ ನೀಡಲಾಗಿದೆ. ಎರಡು ಕಡೆಯೂ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಿತಾ ಎಸ್.ಕೆ ನೇತೃತ್ವ ವಹಿಸಿದ್ದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದುಮತಿ ಪಾಟೀಲ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಆರ್ಸಿಎಚ್ಒ ಡಾ.ಸೂರ್ಯಪ್ರಕಾಶ ಕಂದಕೂರ, ಐಎಂಎ ಅಧ್ಯಕ್ಷ ಡಾ.ಸಿ.ಎಂ.ಪಾಟೀಲ, ಡಾ.ಶರಣರೆಡ್ಡಿ ಕೋಡ್ಲಾ, ಡಾ.ಸುನೀಲ್ ಮೂಕ್ಕನೋರ, ಡಾ.ಬಸವರಾಜ ನರಣಸಿಗಿ, ಡಾ.ದೇವಾನಂದ, ಡಾ.ಪ್ರಶಾಂತ ಬಾಸ್ಕುಕರ್ ಸೇರಿದಂತೆ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.