ADVERTISEMENT

ಕೋವಿಡ್: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಗುಣಮುಖ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 3:44 IST
Last Updated 7 ಅಕ್ಟೋಬರ್ 2020, 3:44 IST
ಪ್ರಭು ಚವ್ಹಾಣ್
ಪ್ರಭು ಚವ್ಹಾಣ್   

ಯಾದಗಿರಿ: ‘ಕಳೆದ 25 ದಿನಗಳಿಂದ ಕೋವಿಡ್‌ನಿಂದ ಬಳಲುತ್ತಿದ್ದ ನಾನು ಈಗ ಸಂಪೂರ್ಣ ಗುಣಮುಖನಾಗಿದ್ದು, ಬುಧವಾರದಿಂದ ಸಾರ್ವಜನಿಕರ ಸೇವೆಗೆ ಬರುತ್ತಿದ್ದೇನೆ’ ಎಂದು ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

‘ಮನೆಯಲ್ಲಿಯೆ ಚಿಕಿತ್ಸೆ ಪಡೆದು ಗುಣಮುಖನಾಗಿದ್ದೇನೆ. ವೈದ್ಯರ ಸಲಹೆ, ಜನತೆಯ ಆಶೀರ್ವಾದ ಮತ್ತು ಆತ್ಮವಿಶ್ವಾಸದಿಂದ ಬೇಗ ಗುಣಮುಖನಾಗಲು ಸಾಧ್ಯವಾಗಿದೆ’ ಎಂದು ಹೇಳಿದ್ದಾರೆ.

‘ಕೊರೊನಾ ತಡೆಗೆ ಇರುವ ಔಷಧಿ ಅಂದರೆ ಅದು ಮಾಸ್ಕ್ ಮಾತ್ರ. ಜನರು ನಿರಂತರವಾಗಿ ಮಾಸ್ಕ್ ಬಳಸಬೇಕು. ಎಲ್ಲ ಬಗೆಯ ವೈದ್ಯಕೀಯ ಸಲಹೆಗಳನ್ನು ಪರಿಗಣಿಸಿ. ಅಂತರ ಕಾಪಾಡಿಕೊಂಡು ತಮ್ಮ ಕಾರ್ಯ ಚಟುವಟಿಕೆಗಳನ್ನು ಮುಂದುವರಿಸಬೇಕು. ಸೋಂಕು ಹರಡುವುದನ್ನು ತಡೆಗಟ್ಟಲು ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.