ಕೆಂಭಾವಿ: ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಪತಿಮಲ್ಲಣ್ಣ ಗುರುವಾರ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಮೀಪದ ಕಾಚಾಪೂರ ಗ್ರಾಮದಲ್ಲಿ ಮಧ್ಯಾಹ್ನ ಬಸಮ್ಮ(34) ಮತ್ತು ಆಕೆಯ ಪ್ರಿಯಕರ ನಾಡಗೌಡ (36) ಹೊಲದಲ್ಲಿ ಜತೆಯಲ್ಲಿ ಇದ್ದಾಗ ಮಲ್ಲಣ್ಣ ಮಾರಕಾಸ್ತ್ರಗಳಿಂದ ಇರಿದು ಇಬ್ಬರನ್ನೂ ಹತ್ಯೆ ಮಾಡಿದ್ದಾನೆ. ಮಲ್ಲಣ್ಣನನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಟಿ.ಮಂಜುನಾಥ, ಪಿಎಸ್ಐ ಹಣಮಂತ ಬಂಕಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.