ವಡಗೇರಾ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಕೊಂಕಲ್ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಬುಧವಾರ ಸಂಜೆ ಕಟ್ಟಿಗೆ ತರಲು ಹೋಗಿದ್ದ ಗ್ರಾಮಸ್ಥ ವೆಂಕಟೇಶ (40) ಎಂಬುವರ ಮೇಲೆ ಮೊಸಳೆ ದಾಳಿ ನಡೆಸಿ, ನೀರಿನಲ್ಲಿ ಎಳೆದೊಯ್ದಿದೆ.
ವೆಂಕಟೇಶ ಪತ್ತೆಗಾಗಿ ಹುಡುಕಾಟ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಿದರು. ಗುರುವಾರ ಬೆಳಿಗ್ಗೆ ಮತ್ತೆ ಶೋಧ ಕಾರ್ಯ ನಡೆಯಲಿದೆ ಎಂದು ವಡಗೇರಾ ಠಾಣೆ ಪೊಲೀಸರು
ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.