ADVERTISEMENT

ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ

ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 4:06 IST
Last Updated 25 ನವೆಂಬರ್ 2021, 4:06 IST
ವೆಂಕಟೇಶ
ವೆಂಕಟೇಶ   

ವಡಗೇರಾ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಕೊಂಕಲ್‌ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಬುಧವಾರ ಸಂಜೆ ಕಟ್ಟಿಗೆ ತರಲು ಹೋಗಿದ್ದ ಗ್ರಾಮಸ್ಥ ವೆಂಕಟೇಶ (40) ಎಂಬುವರ ಮೇಲೆ ಮೊಸಳೆ ದಾಳಿ ನಡೆಸಿ, ನೀರಿನಲ್ಲಿ ಎಳೆದೊಯ್ದಿದೆ.

ವೆಂಕಟೇಶ ಪತ್ತೆಗಾಗಿ ಹುಡುಕಾಟ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಿದರು. ಗುರುವಾರ ಬೆಳಿಗ್ಗೆ ಮತ್ತೆ ಶೋಧ ಕಾರ್ಯ ನಡೆಯಲಿದೆ ಎಂದು ವಡಗೇರಾ ಠಾಣೆ ಪೊಲೀಸರು
ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT