ADVERTISEMENT

ಶಹಾಪುರದಲ್ಲಿ ಭಾರೀ ಮಳೆ: ಬೆಳೆ ನಷ್ಟ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2023, 7:35 IST
Last Updated 18 ಮಾರ್ಚ್ 2023, 7:35 IST
ಶಹಾಪುರ ತಾಲ್ಲೂಕಿನ ದೋರನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದ ಸಜ್ಜೆ ಬೆಳೆ ಹಾಳಾಗಿದೆ
ಶಹಾಪುರ ತಾಲ್ಲೂಕಿನ ದೋರನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದ ಸಜ್ಜೆ ಬೆಳೆ ಹಾಳಾಗಿದೆ   

ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕು ವ್ಯಾಪ್ತಿಯಲ್ಲಿ ಶನಿವಾರ ಬೆಳಗಿನ ಜಾವ ಸುರಿದ ಆಲಿಕಲ್ಲು ಮಿಶ್ರಿತ ಮಳೆಯಿಂದ ಶೇಂಗಾ, ಮೆಣಸಿನಕಾಯಿ, ಜೋಳ, ಸಜ್ಜೆ, ಟೊಮೆಟೊ ಬೆಳೆ ಹಾನಿಯಾಗಿದೆ.

ಶಹಾಪುರ ನಗರದ ವ್ಯಾಪ್ತಿಯಲ್ಲಿ 49 ಎಂಎಂ ಮಳೆಯಾಗಿದೆ. ಇದರಿಂದ ನಗರದ ತಗ್ಗು ಪ್ರದೇಶದ ಮನೆಗೆ ನೀರು ನುಗ್ಗಿವೆ. ದೋರನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 44 ಮಿಲಿ ಮೀಟರ್‌ ಮಳೆಯಾಗಿದೆ. ಧಾರಣಿ ಇಲ್ಲದ ಕಾರಣ ಸಂಗ್ರಹಿಸಿಟ್ಟಿದ್ದ ಹತ್ತಿ ಮಳೆಗೆ ಆಹುತಿ ಆಗಿದೆ. ಸುಂಕು ಕಟ್ಟುವ ಹಂತದಲ್ಲಿದ್ದ ಭತ್ತ, ಸಜ್ಜೆ ಜೋಳ್ಳು ಆಗುವ ಭೀತಿ ಎದುರಾಗಿದೆ.

‘ಸಜ್ಜೆ 6 ಎಕರೆ, ಮೆಣನಕಾಯಿ 4 ಎಕರೆಯಲ್ಲಿ ಬೆಳೆದಿದ್ದೇವು. ಆಲಿಕಲ್ಲು ಮಳೆಯಿಂದ ಬೆಳೆ ಹಾಳಾಗಿದೆ. ಅಧಿಕಾರಿಗಳು ಇನ್ನೂ ಬಂದಿಲ್ಲ. ಕೂಡಲೇ ಸರ್ಕಾರ ನಮ್ಮ ನೆರವಿಗೆ ಬರಬೇಕು’ ಎಂದು ದೋರನಹಳ್ಳಿಯ ರೈತ ಕಿಶನ್‌ ರಾಥೋಡ್‌ ಆಗ್ರಹಿಸಿದರು.

ADVERTISEMENT

‘ಅಕಾಲಿಕ ಮಳೆಯಿಂದ ಜಮೀನಿನಲ್ಲಿದ್ದ ವಿವಿಧ ಬೆಳೆ ಹಾಳಾಗಿದೆ. ಕೂಡಲೇ ಸರ್ಕಾರ ಪರಿಹಾರ ನೀಡಬೇಕು’ ಎಂದು ರೈತ ಮುಖಂಡ ಅಶೋಕ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.