ADVERTISEMENT

ಯಾದಗಿರಿ | ಸಿಲಿಂಡರ್ ಸ್ಫೋಟ ಪ್ರಕರಣ: ಕುಟುಂಬಸ್ಥರಿಗೆ ಸಚಿವ ಚವಾಣ್ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2022, 4:58 IST
Last Updated 28 ಫೆಬ್ರುವರಿ 2022, 4:58 IST
   

ಯಾದಗಿರಿ: ಇತ್ತೀಚೆಗೆ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ ಸಂಭವಿಸಿದ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಕ್ಯಾಂಪ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಸೋಮವಾರ ಭೇಟಿ ನೀಡಿ, ಸಂತ್ರಸ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಭಾನುವಾರ ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ ಎಂದರು.

ಈ ವೇಳೆ ರಾಯಚೂರು ಸಂಸದ ರಾಜಾ ಅಮರೇಶ ನಾಯಕ, ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ.ಆರ್, ಜಿ.ಪಂ. ಸಿಇಒ ಅಮರೇಶ್, ಶಹಾಪುರ ತಹಶೀಲ್ದಾರ್ ಮಧುರಾಜ್ ಕೂಡ್ಲಿಗಿ ಇದ್ದರು.

ADVERTISEMENT

ಯುಕೆಪಿ ಕ್ಯಾಂಪ್‌ನಲ್ಲಿ ಸಿಲಿಂಡರ್ ಅನಿಲ ಸೋರಿಕೆಯಿಂದ ಆದ ಅವಘಡದಿಂದ ಈಗಾಗಲೇ ನಾಲ್ಕು ಜನ ಮೃತಪಟ್ಟಿದ್ದಾರೆ. ಉಳಿದ 19 ಜನ ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಲಿಂಡರ್ ಅನಿಲ ಸೋರಿಕೆಯ ಜಾಗಕ್ಕೆ ಭಾನುವಾರ ಶಹಾಪುರ ಠಾಣೆಯ ಪೊಲೀಸರು ಭೇಟಿ ನೀಡಿ, ಮಹಜರು ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.