ADVERTISEMENT

ಕೋಣ ಬಲಿ ತಡೆಯಲು ಮನವಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 9:45 IST
Last Updated 18 ಡಿಸೆಂಬರ್ 2019, 9:45 IST
ಕೋಣ ಬಲಿ ತಡೆಯುವಂತೆ ಮಂಗಳವಾರ ದಲಿತ ಸಂಘಟನೆಯ ಮುಖಂಡರು ಸುರಪುರ ಪೊಲೀಸ್ ಠಾಣೆಯಲ್ಲಿ ಡಿವೈಎಸ್‍ಪಿ ಶಿವನಗೌಡ ಪಾಟೀಲ್‍ ಅವರಿಗೆ ಮನವಿ ಸಲ್ಲಿಸಿದರು
ಕೋಣ ಬಲಿ ತಡೆಯುವಂತೆ ಮಂಗಳವಾರ ದಲಿತ ಸಂಘಟನೆಯ ಮುಖಂಡರು ಸುರಪುರ ಪೊಲೀಸ್ ಠಾಣೆಯಲ್ಲಿ ಡಿವೈಎಸ್‍ಪಿ ಶಿವನಗೌಡ ಪಾಟೀಲ್‍ ಅವರಿಗೆ ಮನವಿ ಸಲ್ಲಿಸಿದರು   

ಸುರಪುರ: ಹುಣಸಗಿ ತಾಲ್ಲೂಕಿನ ಮಂಜಲಾಪುರಹಳ್ಳಿ ಗ್ರಾಮದಲ್ಲಿ ಡಿಸೆಂಬರ್‌ 23 ಮತ್ತು 25 ರಂದು ದೇವತೆಗಳ ಹೆಸರಿನಲ್ಲಿ ನಡೆಯುವ ಕೋಣ ಬಲಿಯನ್ನು ತಡೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಮುಖಂಡರು ಡಿವೈಎಸ್‍ಪಿ ಶಿವನಗೌಡ ಪಾಟೀಲ ಅವರಿಗೆ ಮನವಿ ಮಂಗಳವಾರ ಸಲ್ಲಿಸಿದರು.

ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ಜಿಲ್ಲೆಯಲ್ಲಿ ಡಿಸೆಂಬರ್ ದಿಂದ ಫೆಬ್ರವರಿವರೆಗೆ ಆಯಾ ಗ್ರಾಮ ದೇವತೆಗಳಾದ ದ್ಯಾವಮ್ಮ, ಮರೆಮ್ಮ, ಮರಗಮ್ಮ ಮತ್ತು ಕೆಂಚಮ್ಮ ಹೆಸರಿನಲ್ಲಿ ಪ್ರಾಣಿ ಬಲಿ ಕೊಡಲಾಗುತ್ತಿದೆ’ ಎಂದು ದೂರಿದರು.

ಜಿಲ್ಲಾ ಸಂಘಟನಾ ಸಂಚಾಲಕ ಅಜೀಜ್‍ಸಾಬ್ ಐಕೂರ್, ಸುರಪುರ ಸಂಚಾಲಕ ತಿಪ್ಪಣ್ಣ
ಶೆಳ್ಳಗಿ, ತಾಲೂಕು ಸಂಘಟನಾ ಸಂಚಾಲಕ ಮಾನಪ್ಪ ಶೆಳ್ಳಗಿ, ಮುಖಂಡರಾದ ಮರಿಲಿಂಗಪ್ಪ ಹುಣಸಿಹೊಳೆ, ಖಾಜಾ ಹುಸೇನ್ ಗುಡುಗುಂಟಿ, ಮಲ್ಲಿಕಾರ್ಜುನ ಮಳ್ಳಳ್ಳಿ, ಮಲ್ಲಿಕಾರ್ಜುನ ಉಕ್ಕಿನಾಳ, ದೇವಿಂದ್ರಪ್ಪ ಮೈಲಾಪುರ, ಬಸವರಾಜ ಗೋನಾಲ, ಭೀಮಣ್ಣ ಕ್ಯಾತನಾಳ, ಶರಣಪ್ಪ ಉಳ್ಳೆಸೂಗೂರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.