ADVERTISEMENT

ರಾಯಚೂರು: ಬಾವಿಯಲ್ಲಿ ಬಿದ್ದು ಬಾಲಕಿಯರ ಸಾವು

​ಪ್ರಜಾವಾಣಿ ವಾರ್ತೆ
Published 31 ಮೇ 2022, 4:24 IST
Last Updated 31 ಮೇ 2022, 4:24 IST

ರಾಯಚೂರು: ತಾಲ್ಲೂಕಿನ ಯರಗೇರಾ ಗ್ರಾಮದಲ್ಲಿ ಸೋಮವಾರ ಮಾವಿನ ತೋಟ ವೀಕ್ಷಿಸಲು ಹೋದ ಇಬ್ಬರು ಬಾಲಕಿಯರು ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದು, ಯುವತಿಯೊಬ್ಬರನ್ನು ರಕ್ಷಿಸಲಾಗಿದೆ.

ರಾಯಚೂರಿನ ಮುಸ್ಕಾನ್ (17) ಹಾಗೂ ಶೀರೀನ್ (19) ಮೃತರು.

ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿರೀನ್ ಮತ್ತ ಮುಸ್ಕಾನ್ ಕುಟುಂಬದವರು ಯರಗೇರಾ ಗ್ರಾಮಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಬಾಲಕಿಯರ ಜೊತೆ ಬಾವಿಗೆ ಬಿದ್ದಿದ್ದ ಯುವತಿಯನ್ನು ಸ್ಥಳೀಯರೊಬ್ಬರು ರಕ್ಷಿಸಿದರು ಎಂದು ಯರಗೇರಾ ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.