ADVERTISEMENT

ವರ್ಷಕ್ಕೆ ನಾಲ್ಕು ಬಾರಿ ರಕ್ತದಾನ ಮಾಡಿ: ಡಾ. ಭಗವಂತ ಅನವಾರ

ನವಚೇತನ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 5:11 IST
Last Updated 17 ಆಗಸ್ಟ್ 2022, 5:11 IST
ವಡಗೇರಾ ಪಟ್ಟಣದ ಹನುಮಾನ್ ದೇವಸ್ಥಾನದಲ್ಲಿ ನವಚೇತನ ಟ್ರಸ್ಟ್  ವತಿಯಿಂದ ರಕ್ತದಾನ ಶಿಬಿರ ನಡೆಯಿತು
ವಡಗೇರಾ ಪಟ್ಟಣದ ಹನುಮಾನ್ ದೇವಸ್ಥಾನದಲ್ಲಿ ನವಚೇತನ ಟ್ರಸ್ಟ್  ವತಿಯಿಂದ ರಕ್ತದಾನ ಶಿಬಿರ ನಡೆಯಿತು   

ಯಾದಗಿರಿ: ಬಹಳಷ್ಟು ಜನರು ರಕ್ತದಾನ ಮಾಡಿದರೆ ಏನಾದರೂ ತೊಂದರೆ ಆಗಬಹುದು ಎಂಬ ಮೂಢನಂಬಿಕೆಯಲ್ಲಿದ್ದಾರೆ.ಆರೋಗ್ಯವಂತ ಮನುಷ್ಯ ವರ್ಷಕ್ಕೆ ನಾಲ್ಕು ಬಾರಿ ರಕ್ತದಾನ ಮಾಡಬಹುದು ನಿವೃತ್ತ ವೈದ್ಯಾಧಿಕಾರಿ ಡಾ. ಭಗವಂತ ಅನವಾರ ಸಲಹೆ ನೀಡಿದರು.

ಜಿಲ್ಲೆಯ ವಡಗೇರಾ ಪಟ್ಟಣದ ಹನುಮಾನ್ ದೇವಸ್ಥಾನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣರ ಜಯಂತಿ ಪ್ರಯುಕ್ತ ನವಚೇತನ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ವಿವಿಧ ಕ್ಷೇತ್ರದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಕ್ತದಾನದಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ ವೃದ್ಧಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ರಕ್ತದ ಅವಶ್ಯಕತೆ ಹೆಚ್ಚಿದೆ. ಆದ್ದರಿಂದ ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ADVERTISEMENT

ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನ ಮಾಡಲಾಯಿತು. ಶಿಕ್ಷಕ ಸುರೇಶ್ ಕರಣಗಿ ನಿರೂಪಿಸಿದರು. ನವಚೇತನ ಟ್ರಸ್ಟ್ ಅಧ್ಯಕ್ಷ ನಿಂಗಣ್ಣ ಜಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಡಾ.ಸುಭಾಷ್ ಕರಣಿಗಿ, ಡಾ.ಸಂಜಿವ ಕುಮಾರ ರಾಯಚೂರಕರ್‌, ಸಾಹಿತಿ ಡಾ. ಗಾಳೆಪ್ಪ ಪೂಜಾರಿ, ವಡಗೇರಾ ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಜಗನ್ನಾಥ ರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕರಿಕಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರೆಪ್ಪ ಬಿಳ್ಹಾರ, ಹೈಯಾಳ ಬಿ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶರಣು ಹೂಸಮನಿ, ವಡಗೇರಾ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶಂಕರಪ್ಪ ಗೊಂದನೂರ, ಅಬ್ದುಲ್ ಕತಾಲಿ, ಫಕೀರಹಮ್ಮದ್ ಮರಡಿ, ರಕ್ತನಿಧಿ ಸಿಬ್ಬಂದಿಗಳಾದ ಚೇತನ್ ಮಿಲ್ಟ್ರಿ, ವೆಂಕಟೇಶ, ಮೌಲನ್ ಸಾಬ, ವಿಜಯ ಅಂಗಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.