ADVERTISEMENT

ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ: ಡಾ.ಲಕ್ಷ್ಮಿಕಾಂತ

​ಪ್ರಜಾವಾಣಿ ವಾರ್ತೆ
Published 5 ಜನವರಿ 2020, 15:05 IST
Last Updated 5 ಜನವರಿ 2020, 15:05 IST
ಯಾದಗಿರಿಯ ಲಾಡಿಸ್‍ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ತೀವ್ರಗೊಂಡ ಮಿಷನ್ ಇಂದ್ರಧನುಷ್ ಲಸಿಕೆ ಕಾರ್ಯಕ್ರಮ ನಡೆಯಿತು
ಯಾದಗಿರಿಯ ಲಾಡಿಸ್‍ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ತೀವ್ರಗೊಂಡ ಮಿಷನ್ ಇಂದ್ರಧನುಷ್ ಲಸಿಕೆ ಕಾರ್ಯಕ್ರಮ ನಡೆಯಿತು   

ಯಾದಗಿರಿ: ಜಿಲ್ಲೆಯಾದ್ಯಂತ ಜನವರಿ 3ರಿಂದ ತೀವ್ರತರದ ಮಿಷನ್ ಇಂದ್ರಧನುಷ್ ಲಸಿಕೆ ಅಭಿಯಾನ- 2.0 ಎರಡನೇ ಸುತ್ತಿನ ಕಾರ್ಯಕ್ರಮ ಆರಂಭವಾಗಿದ್ದು, ಅಭಿಯಾನದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ ಕುಲಕರ್ಣಿ ಮನವಿ ಮಾಡಿದರು.

ನಗರದ ಲಾಡಿಸ್‍ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ತೀವ್ರಗೊಂಡ ಮಿಷನ್ ಇಂದ್ರಧನುಷ್ ಲಸಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಗುವಿಗೆ 10 ಮಾರಕ ರೋಗಗಳ ವಿರುದ್ಧ ತಪ್ಪದೇ ಲಸಿಕೆ ನೀಡಬೇಕು. ಗರ್ಭಿಣಿಯರು ಸಹ ಟಿ.ಟಿ ಮತ್ತು ವರ್ಧಕ ಲಸಿಕೆಗಳನ್ನು ಹಾಕಿಸಿದರೆ ತಾಯಿ ಮತ್ತು ಮಗು ಆರೋಗ್ಯದಿಂದ ಇರಲು ಸಾಧ್ಯ. 5 ವರ್ಷದಲ್ಲಿ 7 ಬಾರಿ ತಪ್ಪದೇ ಲಸಿಕೆಯನ್ನು ಹಾಕಿಸುವಂತೆ ತಿಳಿಸಿದರು.

ADVERTISEMENT

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ಮಾತನಾಡಿ, ಮಕ್ಕಳಿಗೆ ಲಸಿಕೆ ಕೊಡಿಸುವುದು ಪೋಷಕರ ಕರ್ತವ್ಯವಾಗಿದೆ ಮತ್ತು ಲಸಿಕೆ ಪಡೆಯುವುದು ಪ್ರತಿ ಮಗುವಿನ ಹಕ್ಕು. 0-5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ ರೋಗ ಬಾರದಂತೆ ಎಚ್ಚರವಹಿಸಬೇಕು. ಮೂರನೇ ಸುತ್ತು ಫೆಬ್ರುವರಿ 3ರಿಂದ ಹಾಗೂ ನಾಲ್ಕನೇ ಸುತ್ತು ಮಾರ್ಚ್ 2ರಿಂದ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಿರಿಯ ಆರೋಗ್ಯ ಸಹಾಯಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು ಅಥವಾ ಉಚಿತ ಸಹಾಯವಾಣಿ ಸಂಖ್ಯೆ 104ಕ್ಕೆ ಕರೆ ಮಾಡಬಹುದು ಎಂದು ಸಲಹೆ ನೀಡಿದರು.

ಆರೋಗ್ಯ ಮೇಲ್ವಿಚಾರಕ ಸತ್ಯನಾರಾಯಣ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ, ಕಿರಿಯ ಆರೋಗ್ಯ ಸಹಾಯಕಿ ಸಕ್ಕುಬಾಯಿ, ಅಂಗನವಾಡಿ ಕಾರ್ಯಕರ್ತೆಯರಾದ ಸೀತಾಬಾಯಿ, ಸಾಬಮ್ಮ, ಅಶ್ವತ್, ಶರಣು ಸೇರಿದಂತೆ ತಾಯಂದಿರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.