ADVERTISEMENT

‘ನರೇಗಾ ಯೋಜನೆ ವಿಸ್ತರಿಸಿ ಬಲಪಡಿಸಿ’

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 16:00 IST
Last Updated 1 ಸೆಪ್ಟೆಂಬರ್ 2020, 16:00 IST
ಸುರಪುರ ತಾಲ್ಲೂಕಿನ ಆಲ್ದಾಳ ಗ್ರಾಮದಲ್ಲಿ ಮಂಗಳವಾರ ಕೃಷಿ ಕೂಲಿಕಾರರ ಸಭೆ ನಡೆಯಿತು
ಸುರಪುರ ತಾಲ್ಲೂಕಿನ ಆಲ್ದಾಳ ಗ್ರಾಮದಲ್ಲಿ ಮಂಗಳವಾರ ಕೃಷಿ ಕೂಲಿಕಾರರ ಸಭೆ ನಡೆಯಿತು   

ಸುರಪುರ: ‘ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಈ ರೋಗದ ಲಸಿಕೆ ಅಭಿವೃದ್ಧಿ ಹಂತದಲ್ಲಿದೆ. ಇದು ಕೃಷಿ ಕೂಲಿಕಾರರ ಮೇಲೆ ಗಂಭೀರ ಪರಿಣಾಮ ಬೀರಿದೆ’ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ. ನಿತ್ಯಾನಂದ ಸ್ವಾಮಿ ಕಳವಳ ವ್ಯಕ್ತಪಡಿಸಿದರು.

ತಾಲ್ಲೂಕಿನ ಆಲ್ದಾಳ ಗ್ರಾಮದಲ್ಲಿ ಮಂಗಳವಾರ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಕೃಷಿ ಕೂಲಿಕಾರರ ಸಭೆಯಲ್ಲಿ ಅವರು ಮಾತನಾಡಿದರು.

‘ಸರ್ಕಾರ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೃಷಿ ಕೂಲಿಕಾರರ ಕೈ ಹಿಡಿಯಬೇಕು. ನರೇಗಾ ಯೋಜನೆಯೊಂದೆ ಇದಕ್ಕೆ ಪರಿಹಾರ. ಕಾರಣ ನರೇಗಾ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿ ಬಲಪಡಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ನಗರ ಪ್ರದೇಶದ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಪ್ರತ್ಯೇಕ ಯೋಜನೆ ಸಿದ್ಧಪಡಿಸಬೇಕು. ಕೂಲಿಕಾರರ ಪ್ರತಿ ಕುಟುಂಬಕ್ಕೆ ಮುಂದಿನ 6 ತಿಂಗಳವರೆಗೆ ₹7500 ನೆರವು ನೀಡಬೇಕು. ಪ್ರತಿ ಕಾರ್ಮಿಕರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿ, ಗೋಧಿ, ಬೇಳೆ, ಅಡುಗೆಎಣ್ಣೆ, ಸಕ್ಕರೆ ಮೊದಲಾದ ಜೀವನಾವಶ್ಯಕ ವಸ್ತುಗಳನ್ನು ಉಚಿತವಾಗಿ ವಿತರಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ದಾವಲಸಾಬ ನದಾಫ್ ಮಾತನಾಡಿ, ‘ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸೆ.5 ರಂದು ಬೃಹತ್ ಪ್ರತಿಭಟನೆ ಮಾಡಲಾಗುವುದು’ ಎಂದು ತಿಳಿಸಿದರು.

ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಶರಣಬಸವ ಜಂಬಲದಿನ್ನಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಘಟಕದ ಕಾರ್ಯದರ್ಶಿ ರಂಗಪ್ಪನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಮ್ಮ ಕೊಂಡಾಪುರ, ಶಿವಶಂಕರ ಕಂಬಳಿ, ಮಾನಪ್ಪ ವಿಭೂತಿಹಳ್ಳಿ, ದುರ್ಗಮ್ಮ ನಾಲ್ವರ್, ಸಿದ್ದಮ್ಮ ಹಾಲಗೇರಿ, ರಾಜುಸಿಂಗ್ ಜಮಾದಾರ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.