ADVERTISEMENT

‘ಎಚ್ಚರಿಕೆಯಿಂದ ಬಿತ್ತನೆ ಬೀಜ ಖರೀದಿಸಿ’

​ಪ್ರಜಾವಾಣಿ ವಾರ್ತೆ
Published 23 ಮೇ 2022, 12:16 IST
Last Updated 23 ಮೇ 2022, 12:16 IST
 ಜಯಪ್ಪ ಸಿಂಗನೋಡಿ
 ಜಯಪ್ಪ ಸಿಂಗನೋಡಿ   

ಬಳಿಚಕ್ರ (ಸೈದಾಪುರ): ‘ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ರೈತರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಕೃಷಿ ಅಧಿಕಾರಿ ಜಯಪ್ಪ ಹೇಳಿದರು.

ಬಳಿಚಕ್ರ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯಲ್ಲಿ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಯಷ್ಟು ಸುರಿಯ ಲಿದೆ. ನಾಲ್ಕು ದಿನ ಮೊದಲೇ ಕಾಲಿಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಒಂದು ವಾರದೊಳಗೆ ಹೆಸರು, ತೊಗರಿ ಮತ್ತು ಭತ್ತದ ಬೀಜ ಶೇಖರಿಸಲಾಗುವುದು. ಬಿತ್ತನೆ ಬೀಜ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ಕೆ–ಕಿಸಾನ್ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹೆಸರು ನೋಂದಾಯಿಸಿಕೊಳ್ಳಲು ಆಧಾರ್ ಕಾರ್ಡ್‌, ಪಹಣಿ–ಹೋಲ್ಡಿಂಗ್, ಬ್ಯಾಂಕ್‌ ಪಾಸ್‌ಬುಕ್‌ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು ಎಂದಿದ್ದಾರೆ.

ADVERTISEMENT

ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟ ಹಾಗೂ ಅನಧಿಕೃತವಾಗಿ ಬೀಜ ಮಾರಾಟ ಮಾಡುವುದು ಕಂಡುಬಂದಲ್ಲಿ ರೈತರು ತಕ್ಷಣ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಳಿಗೆ ಮಾಹಿತಿ ನೀಡಬೇಕು. ಬಿತ್ತನೆ ಬೀಜ ಖರೀದಿಸುವಾಗ ತಪ್ಪದೇ ಅಧಿಕೃತ ರಶೀದಿ ಪಡೆಯಬೇಕು ಮತ್ತು ರಶೀದಿಯಲ್ಲಿ ಲಾಟ್ ನಂಬರ್ ನಮೂದಿಸಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.