ಯಾದಗಿರಿ: ನಗರ ಸೇರಿದಂತೆ
ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಗುಡುಗು, ಸಿಡಿಲು ಸಹಿತ ಜೋರು ಮಳೆಯಾಗಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲಿಗೆ ಬಲಿಯಾಗಿದ್ದಾರೆ.
ತಾಲ್ಲೂಕಿನ ವರ್ಕನಹಳ್ಳಿ ಗ್ರಾಮದ ಶರಣಪ್ಪ ಸಾಬಯ್ಯ ಎಗ್ಗನೋರ್ (42) ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಮಧ್ಯಾಹ್ನ 2:30 ವರೆಗೆ ಆರಂಭವಾದ ಮಳೆ ಸುಮಾರು 15 ನಿಮಿಷ ರಭಸವಾಗಿ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.