ಶಹಾಪುರ: ತಾಲ್ಲೂಕಿನ ಯಕ್ಷಿಂತಿ ಗ್ರಾಮದ ಸಮೀಪ ಕೃಷ್ಣಾ ನದಿಯಲ್ಲಿ ಶನಿವಾರ ಕುರಿಗಳ ಮೈ ತೊಳೆಯುತ್ತಿದ್ದ ವೇಳೆ ಕುರಿಗಾಯಿಯೊಬ್ಬರು ಮೊಸಳೆ ದಾಳಿಯಿಂದ ಸಾವನ್ನಪ್ಪಿದ್ದಾರೆ.
ಶಹಾಪುರ ತಾಲ್ಲೂಕಿನ ಶಾರದಹಳ್ಳಿ ಗ್ರಾಮದ ಲಕ್ಷ್ಮಣ ಭೀಮಣ್ಣ (45) ಮೃತರು. ಅವರಿಗೆ ಪತ್ನಿ ಮತ್ತು ನಾಲ್ವರು ಮಕ್ಕಳಿದ್ದಾರೆ.
‘ಶನಿವಾರ ಮಧ್ಯಾಹ್ನ 12ರ ಸುಮಾರಿಗೆ ಕುರಿಗಳ ಮೈತೊಳೆಯುತ್ತಿದ್ದ ವೇಳೆ ಮೊಸಳೆ ದಾಳಿ ಮಾಡಿತು. ನಮ್ಮ ತಂದೆ ಲಕ್ಷ್ನಣ ಅವರು ಅದರ ಬಾಯಿಯಿಂದ ತಪ್ಪಿಸಿಕೊಳ್ಳಲು ಹೋರಾಟ ನಡೆಸಿದರು. ಮೂರು ಬಾರಿ ಪಲ್ಟಿ ಹೊಡೆದ ಮೊಸಳೆಯು ತಂದೆಯವರನ್ನು ಎಳೆದುಕೊಂಡು ನೀರಿನೊಳಗೆ ಹೋಯಿತು. ಎಷ್ಟೇ ಪ್ರಯತ್ನಿಸಿದರೂ ಅವರನ್ನು ರಕ್ಷಿಸಿಕೊಳ್ಳಲು ಆಗಲಿಲ್ಲ’ ಎಂದು ಲಕ್ಷ್ಮಣ ಪುತ್ರ ತಾಯಪ್ಪ ತಿಳಿಸಿದರು.
ಶವ ಪತ್ತೆಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಗ್ರೇಡ್–2 ಪ್ರಕಾಶ ಹೊಸಮನಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.