ಯಾದಗಿರಿ: ಹಾವು ಕಡಿದು ರೈತ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಳಿಚಕ್ರ ತಾಂಡಾದಲ್ಲಿ ಭಾನುವಾರ ರಾತ್ರಿ ಜರುಗಿದೆ.
ಬಂಗಾರಪ್ಪ ತುಕಾರಾಮ ಚವಾಣ(31) ಮೃತಪಟ್ಟಿರುವ ರೈತ. ಅವರು, ತಮ್ಮ ಜಮೀನಿನಲ್ಲಿ ಭಾನುವಾರ ರಾತ್ರಿ ಶೇಂಗಾ ಬೆಳೆಗೆ ನೀರುಣಿಸುತ್ತಿರುವಾಗ ಹಾವು ಕಚ್ಚಿ, ಮೃತಪಟ್ಟಿದ್ದಾರೆ.
ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.