ADVERTISEMENT

ಯಾದಗಿರಿ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 8:28 IST
Last Updated 1 ಸೆಪ್ಟೆಂಬರ್ 2020, 8:28 IST
ಮಂಜೂರ್‌ ಸಾಬ್
ಮಂಜೂರ್‌ ಸಾಬ್   

ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಗೊಂದೆನೂರು ಗ್ರಾಮದ ರೈತ ಮಂಜೂರ್‌ ಸಾಬ್ (48) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈತ ಕೃಷಿ ಚಟುವಟಿಕೆಗಾಗಿ ಡಿಸಿಸಿ ಬ್ಯಾಂಕ್‌ನಲ್ಲಿ ₹30 ಸಾವಿರ ಸಾಲ ಹಾಗೂ ಖಾಸಗಿಯಾಗಿ ₹4 ಲಕ್ಷ ರೂಪಾಯಿ ಸಾಲ ತೆಗೆದುಕೊಂಡಿದ್ದಾರೆ. ತಮ್ಮ 3 ಎಕರೆ ಜಮೀನಿನಲ್ಲಿ ಸಾಲ ಮಾಡಿ ಹತ್ತಿ ಬೆಳೆದಿದ್ದರು.ಕೃಷ್ಣಾನದಿ ಪ್ರವಾಹದಿಂದ ಬೆಳೆ ಸಂಪೂರ್ಣ ಹಾನಿಯಾಗಿತ್ತು. ಇದರಿಂದ ಮನನೊಂದ ರೈತ ಶನಿವಾರ ರಾತ್ರಿ ಕ್ರಿಮಿನಾಶಕ ಸೇವನೆ ಮಾಡಿದ್ದರು.

ಅವರನ್ನು ವಡಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿ ಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನೀಡಿ ವೈದ್ಯರು ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಆರೋಗ್ಯದಲ್ಲಿ ಬದಲಾವಣೆ ಕಾಣದ ಪರಿಣಾಮ ಅಲ್ಲಿನ ವೈದ್ಯರು ರಾಯಚೂರಿನರಿಮ್ಸ್‌ಗೆ ಕಳುಹಿಸಿದ್ದರು. ಅಲ್ಲಿ ಚಿಕಿತ್ಸೆಗೆ ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ವಡಗೇರಾ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.