ADVERTISEMENT

ಕಿರಾಣಿ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ: ₹10ಲಕ್ಷ ಮೌಲ್ಯದ ಆಹಾರ ಸಾಮಗ್ರಿ ಹಾನಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 14:59 IST
Last Updated 12 ಏಪ್ರಿಲ್ 2019, 14:59 IST
ಶಹಾಪುರ ನಗರದ ಬಸವೇಶ್ವರ ವೃತ್ತದ ಬಳಿ ಶುಕ್ರವಾರ ಬೆಳಗಿನ ಜಾವ ಕಿರಾಣಿ ಅಂಗಡಿಗೆ ಆಕಸ್ಮಿಕ ವಿದ್ಯುತ್ ತಗುಲಿ ಸುಮಾರು $10ಲಕ್ಷ ಮೌಲ್ಯದ ಆಹಾರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ
ಶಹಾಪುರ ನಗರದ ಬಸವೇಶ್ವರ ವೃತ್ತದ ಬಳಿ ಶುಕ್ರವಾರ ಬೆಳಗಿನ ಜಾವ ಕಿರಾಣಿ ಅಂಗಡಿಗೆ ಆಕಸ್ಮಿಕ ವಿದ್ಯುತ್ ತಗುಲಿ ಸುಮಾರು $10ಲಕ್ಷ ಮೌಲ್ಯದ ಆಹಾರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ   

ಶಹಾಪುರ: ನಗರದ ಬಸವೇಶ್ವರ ವೃತ್ತದ ಬಳಿ ಮಹಾಂತೇಶ್ವರ ಕಿರಾಣಿ ಅಂಗಡಿಯಲ್ಲಿ ಶುಕ್ರವಾರ ಬೆಳಗಿನ ಜಾವ 5ಕ್ಕೆ ವಿದ್ಯುತ್ ಅವಘಡ ಸಂಭವಿಸಿದ ಪರಿಣಾಮ ₹ 10 ಲಕ್ಷ ಮೌಲ್ಯದ ಕಿರಾಣಿ ಮತ್ತು ಆಹಾರ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿ ಹೊತ್ತಿರುವುದು ಕಂಡ ಕೂಡಲೇ ಪಕ್ಕದ ಗುರುಪ್ರಸಾದ ಹೋಟೆಲ್‌ ಮಾಲೀಕರು ಅಗ್ನಿ ಶಾಮಕ ದಳದವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ಆಗ್ನಿಶಾಮಕ ದಳ ಸಿಬ್ಬಂದಿ ಬರುವಷ್ಟರಲ್ಲಿ ಅಂಗಡಿಯ ಹೆಚ್ಚಿನ ಸಾಮಗ್ರಿಗಳು ಬೆಂಕಿ ವ್ಯಾಪಿಸಿತ್ತು.

ಅಂಗಡಿಯ ಮೇಲ್ಛಾವಣಿ ಕಟ್ಟಿಗೆ ತುಂಡುಗಳನ್ನು ಇಡಲಾಗಿತ್ತು. ಅದರಿಂದ ಇನ್ನಷ್ಟು ಬೆಂಕಿ ವ್ಯಾಪಿಸಿದೆ ಎಂದು ಮೂಲಗಳು ತಿಳಿಸಿವೆ. ವಿದ್ಯುತ್ ಅವಘಡಕ್ಕೆ ಶಾರ್ಟ್‌ ಸರ್ಕಿಟ್ ಕಾರಣ ಇರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.