ವಡಗೇರಾ: ತಾಲ್ಲೂಕಿನ ಗುಂಡ್ಲೂರು ಗ್ರಾಮದ ಹತ್ತಿರ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ತಾಲ್ಲೂಕಿನ ಅಗ್ನಿಹಾಳ ಗ್ರಾಮದಲ್ಲಿ ವಾಸವಾಗಿದ್ದ ಮೀನುಗಾರರ ಕುಟುಂಬಕ್ಕೆ ಸೇರಿದ ಮನು (20) ಮೃತ ಯುವಕ.
ತಂದೆ ಅರ್ಜುನ ಹಾಗೂ ಮನು ಶುಕ್ರವಾರ ಬೆಳಿಗ್ಗೆ ಮೀನು ಹಿಡಿಯಲು ಕೃಷ್ಣಾ ನದಿಗೆ ಬೆಂಡ್ ಮೇಲೆ ತೆರಳಿದ್ದಾರೆ. ಬಲೆ ಹಾಕುವಾಗ ಕಾಲಿಗೆಬಲೆ ಸುತ್ತಿಕೊಂಡು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮೀನುಗಾರರ ಸಹಾಯದಿಂದ ಶವವನ್ನು ಹೊರ ತೆಗೆಯಲಾಗಿದ್ದು, ಕಾಲಿಗೆ ಬಲೆ ಸುತ್ತಿಕೊಂಡಿರುವುದು ಗೊತ್ತಾಗಿದೆ.
ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಸ್ಥಳಕ್ಕೆ ವಡಗೇರಾ ತಹಶೀಲ್ದಾರ್ ಸುರೇಶ ಅಂಕಲಗಿ, ಕಂದಾಯ ನಿರೀಕ್ಷಕ ಸಂಜುಕುಮಾರ ಕಾವಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.