ADVERTISEMENT

ಶ್ರದ್ಧಾ ಭಕ್ತಿಯ ಗಣೇಶ ಚತುರ್ಥಿ

ಜಿಲ್ಲಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 15:59 IST
Last Updated 23 ಆಗಸ್ಟ್ 2020, 15:59 IST
ಯಾದಗಿರಿಯ ಶಿವನಗರದ ಏರಿಯಾದ ತರುಣ ಸಂಘದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ
ಯಾದಗಿರಿಯ ಶಿವನಗರದ ಏರಿಯಾದ ತರುಣ ಸಂಘದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ   

ಯಾದಗಿರಿ:ಗಣೇಶ ಚತುರ್ಥಿ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಈ ಬಾರಿ ಕೊರೊನಾ ಕಾರಣದಿಂದ ಹೆಚ್ಚಿನ ಸಂಖ್ಯೆಯ ಗಣೇಶ ಮಂಡಳಿಗಳು ವಿಗ್ರಹ ಪ‍್ರತಿಷ್ಠಾಪನೆ ಮಾಡಿಲ್ಲ.

ನಗರದ ವಿವಿಧ ಕಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಕೆಲ ಕಡೆ ಚಿಕ್ಕ ಗಾತ್ರದ ಮೂರ್ತಿಗಳನ್ನು ಒಂದೇ ದಿನ ಪ್ರತಿಷ್ಠಾಪಿಸಿ ನಂತರ ವಿಸರ್ಜಿಸಲಾಯಿತು.ಸರ್ಕಾರದ ಸೂಚನೆಯ ಮೇರೆಗೆ ಮೆರವಣಿಗೆ ನಡೆಯಲಿಲ್ಲ.ಬೆಳಿಗ್ಗೆ ಮತ್ತು ಸಂಜೆ ಪೂಜೆ ಮಾಡಿಮಹಾಮಂಗಳಾರತಿ ನಂತರ ಪ್ರಸಾದ ವಿತರಿಸಲಾಯಿತು.

ಸರ್ಕಾರ ಹಲವಾರು ನಿರ್ಬಂಧ ವಿಧಿಸಿದ್ದರಿಂದ ಹೆಚ್ಚಿನ ಗಣೇಶ ಮಂಡಳಿಗಳುಅರ್ಜಿ ಸಲ್ಲಿಸಿಲ್ಲ ಎಂದು ನಗರಸಭೆ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.