ಯಾದಗಿರಿ: ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು. ಸರ್ಕಾರ ಅಂಗವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ ಹೇಳಿದರು.
ನಗರದ ವಾರ್ಡ್ ನಂ.31ರ ರಾಜೀವ್ ಗಾಂಧಿ ನಗರದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಿಟ್ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ತಾಯಂದಿಯರು ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ಪಾರು ಮಾಡಬೇಕು ಎಂದು ಸಲಹೆ ನೀಡಿದರು.
ಹಣಮಂತ ವಲ್ಯಾಪುರೆ, ಅಂಗನವಾಡಿ ಸಹಾಯಕಿ, ಕಾರ್ಯಕರ್ತೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.