ಸೈದಾಪುರ: ಸಂಸ್ಥೆಯ ಸಿಬ್ಬಂದಿ ಸಹಕಾರೊಂದಿಗೆ ಶೈಕ್ಷಣಿಕೆ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಹೇಳಿದರು.
ಪಟ್ಟಣದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಪ್ರಭುಲಿಂಗ ವಾರದ ಅವರನ್ನು ಸನ್ಮಾನಿಸಿ ಮಾತನಾಡಿದರು.
ಗಡಿ ಭಾಗದಲ್ಲಿ ಭಾಷೆ ಸಮಸ್ಯೆ ಸೇರಿದಂತೆ ಹಲವು ತೊಂದರೆಗಳಿವೆ. ಇವುಗಳ ಮಧ್ಯೆ ಗುಣಮಟ್ಟದ ಶಿಕ್ಷಣ ನೀಡುವಂತಾಗಲು ಆಡಳಿತ ಮಂಡಳಿಯ ಸದಸ್ಯರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.
ಈಚೆಗೆ ನಿಧನರಾದ ಸಂಸ್ಥೆಯ ಮುಖಂಡರಾದ ಆರ್.ಎಸ್.ಪಾಟೀಲ ಸಂಗ್ವಾರ ಹಾಗೂ ಶಿವಣ್ಣಗೌಡ ಪಾಟೀಲ ಕ್ಯಾತನಾಳ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಂಸ್ಥೆಯ ಉಪಾಧ್ಯಕ್ಷರಾದ ಪಲ್ಲಾ ಲಕ್ಷ್ಮಿಕಾಂತರೆಡ್ಡಿ, ಕಾರ್ಯದರ್ಶಿ ಬಸವರಾಜ ಪಾಟೀಲ ಕ್ಯಾತನಾಳ, ಪದಾಧಿಕಾರಿಗಳಾದ ಕೆ.ಬಿ.ಗೋವರ್ಧನ, ಮುಕುಂದಕುಮಾರ ಅಲಿಝಾರ, ಬೂದೆಪ್ಪಗೌಡ ಪಾಟೀಲ, ಚಂದ್ರಶೇಖರ ಐರಡ್ಡಿ, ಪ್ರಭುಲಿಂಗ ವಾರದ, ಸಿದ್ರಾಮಪ್ಪಗೌಡ ಗೊಂದೆಡಗಿ, ಚೆನ್ನಾರಡ್ಡಿ ಹುಣಸೇಮರ, ಸೂರ್ಯಪ್ರಕಾಶ ಆನಂಪಲ್ಲಿ, ಮುಖ್ಯಶಿಕ್ಷಕ ಲಿಂಗಾರಡ್ಡಿ ನಾಯಕ, ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ಸಿಬ್ಬಂದಿ ಅನುರಾಧ, ಸತೀಶ ಪುರ್ಮಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.