ಯಾದಗಿರಿ: ನಗರ ಸೇರಿ ಜಿಲ್ಲೆಯಾದ್ಯಂತ ಸೋಮವಾರ ಜಿಟಿ ಜಿಟಿ ಮಳೆ ಸುರಿಯಿತು. ಗುರುಮಠಕಲ್, ಶಹಾಪುರ, ಸುರಪುರ, ವಡಗೇರಾ, ಯರಗೋಳ, ಕೆಂಭಾವಿಯಲ್ಲಿ ಉತ್ತಮ ಮಳೆಯಾಗಿದೆ.
ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಉತ್ತಮ ಮಳೆ ಸುರಿಯಿತು. ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಹರ್ಷ ಉಂಟು ಮಾಡುತ್ತಿದೆ. ಕೃಷಿ ಚಟುವಟಿಕೆ ಕೈಗೊಳ್ಳಲು ಪೂರಕವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.