ಯಾದಗಿರಿ: ಸರ್ಕಾರ ಜಾರಿಗೆ ತಂದಿರುವ ಹಲವು ಯೋಜನೆಗಳ ಲಾಭ ಪಡೆದು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಕರೆ ನೀಡಿದರು.
ನಗರದ ಬಾಲಾಜಿ ಕಲ್ಯಾಣ ಮಂಟಪದ ಹತ್ತಿರವಿರುವ ಕಲಿಕಾ ಟ್ರಸ್ಟ್ಗೆ ಶುಕ್ರವಾರ ಭೇಟಿ ನೀಡಿ ಲಂಬಾಣಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸುತ್ತಿರುವ ವಿವಿಧ ಕರಕುಶಲ ವಸ್ತು ಪ್ರದರ್ಶನ ವೀಕ್ಷಿಸಿ ಮಾತನಾಡಿದರು.
ಮಹಿಳೆಯರ ಏಳಿಗೆಗೆ ಸರ್ಕಾರ ರೂಪಿಸಿರುವ ಯೋಜನೆಗಳು ಪೂರಕವಾಗಿವೆ. ವಿವಿಧ ಯೋಜನೆಗಳ ಕುರಿತು ತರಬೇತಿ ಪಡೆದು, ಆ ಮೂಲಕ ಆರ್ಥಿಕವಾಗಿ ಬಲಾಢ್ಯರಾಗಬೇಕು. ಅದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.
ಕರಕುಶಲ ವಸ್ತುಗಳಾದ ಲಂಬಾಣಿ ಉಡುಪು, ಮಾಸ್ಕ್, ಕೈಚೀಲ, ಕೈಯಿಂದ ತಯಾರಿಸಿದ ಸರಗಳು ಸೇರಿದಂತೆ ಇನ್ನಿತರೆ ವಸ್ತುಗಳನ್ನು ವೀಕ್ಷಿಸಿ, ಸಂತಸ ವ್ಯಕ್ತಪಡಿಸಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಮ್ಯಾಗೇರಿ, ಟಾಟಾ ಟ್ರಸ್ಟ್ ಕಲಿಕೆ ಸಂಸ್ಥೆಯ ನಿರ್ದೇಶಕ ಗಿರೀಶ, ಪ್ರಮಿಳಾ, ಸಾಯಿಬಾಬ, ಮಯೂರ ಪೂಜಾರಿ, ಜಿಲ್ಲಾ ಮಹತ್ವಾಕಾಂಕ್ಷೆ ಸಮಾಲೋಚಕರು ಸೇರಿದಂತೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.