ADVERTISEMENT

ಫೇಸ್‌ಬುಕ್‌ನಲ್ಲಿ ಅವಹೇಳನ: ಶಿಕ್ಷಕ ಬಂಧನ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 4:41 IST
Last Updated 4 ಅಕ್ಟೋಬರ್ 2021, 4:41 IST

ಶಹಾಪುರ: ಶ್ರೀಶೈಲ ಜಗದ್ಗುರುಗಳು ಫೇಸ್‌ಬುಕ್‌ನಲ್ಲಿ ‘ಮತಾಂತರಿಗಳ ವಿರುದ್ಧ ಕಠಿಣ ಕಾನೂನು ಜಾರಿ ಅಗತ್ಯ’ ಎಂದು ಹೇಳಿಕೆ ನೀಡಿದ್ದಕ್ಕೆ ಅವಾಚ್ಯ ಶಬ್ಧಗಳ ಮೂಲಕ ಪ್ರತಿಕ್ರಿಯೆ ನೀಡಿದ್ದ ನಗರದ ಶಿಕ್ಷಕ ಸಾಜಿದ್ ಹುಸೇನ್ ಸುಲೇದಾರ್ ಅವರನ್ನು ಭಾನುವಾರ ಶಹಾಪುರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಶನಿವಾರ ನಗರದ ವೀರಶೈವ ಲಿಂಗಾಯತ ಮತ್ತು ಬೇಡ ಜಂಗಮ ಸಮಾಜದ ಯುವ ಮುಖಂಡರು ಠಾಣೆಗೆ ತೆರಳಿ ಶಿಕ್ಷಕನ್ನು ಬಂಧಿಸುವಂತೆ ದೂರು ಸಲ್ಲಿಸಿದ್ದರು. ಅಲ್ಲದೆ ನಗರದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ಸಾಜಿದ್ ಹುಸೇನ್ ಸುಲೇದಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವೀರಶೈವ ಲಿಂಗಾಯತ ಯುವ ಘಟಕದ ಅಧ್ಯಕ್ಷ ಶಂಭುಲಿಂಗ ಗೋಗಿ ನಗರ ಠಾಣೆಯಲ್ಲಿ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT