ADVERTISEMENT

ಸಾವೂರು: ದಿನಸಿ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 12:34 IST
Last Updated 8 ಜೂನ್ 2021, 12:34 IST
ಸೈದಾಪುರ ಸಮೀಪದ ಸಾವೂರು ಗ್ರಾಮದಲ್ಲಿ ಎಪಿಎಫ್ ಸಂಸ್ಥೆಯಿಂದ ಕೂಲಿ ಕಾರ್ಮಿಕರಿಗೆ ಮತ್ತು ಬಡವರಿಗೆ ಅಗತ್ಯ ಆಹಾರ ಸಾಮಗ್ರಿ ವಿತರಿಸಲಾಯಿತು
ಸೈದಾಪುರ ಸಮೀಪದ ಸಾವೂರು ಗ್ರಾಮದಲ್ಲಿ ಎಪಿಎಫ್ ಸಂಸ್ಥೆಯಿಂದ ಕೂಲಿ ಕಾರ್ಮಿಕರಿಗೆ ಮತ್ತು ಬಡವರಿಗೆ ಅಗತ್ಯ ಆಹಾರ ಸಾಮಗ್ರಿ ವಿತರಿಸಲಾಯಿತು   

ಸೈದಾಪುರ: ಸಮೀಪದ ಸಾವೂರು ಗ್ರಾಮದಲ್ಲಿ ಕೂಲಿ ಕಾರ್ಮಿಕರು, ಬಡವರು ಮತ್ತು ನಿರ್ಗತಿಕರಿಗೆ ಅಜೀಂ ಪ್ರೇಮ್‍ಜಿ ಸಂಸ್ಥೆಯ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

ಈ ವೇಳೆ ಗ್ರಾ.ಪಂ ಸದಸ್ಯ ಮಲ್ಲು ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಉದ್ದೇಶದಿಂದ ಸರ್ಕಾರ ಲಾಕ್‍ಡೌನ್ ಘೋಷಣೆ ಮಾಡಿದೆ. ಇದರಿಂದ ನಮ್ಮಂತಹ ಬಡ ವರ್ಗದವರಿಗೆ ಒಂದೊಂತ್ತಿನ ಊಟಕ್ಕೂ ಪರದಡಾವಂತಾಗಿದೆ. ಇಂತಹ ಸಂದರ್ಭದಲ್ಲಿ ಈ ಸಂಸ್ಥೆಯವರು ಮನೆ ಬಾಗಿಲಿಗೆ ಬಂದು ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.

ನಂತರ ಎಪಿಎಫ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಆರ್ ಚಿಲಾಮಣಿ ಮಾತನಾಡಿದರು.

ADVERTISEMENT

ಗ್ರಾ.ಪಂ ಸದಸ್ಯ ಮಲ್ಲು, ನಾಗರಾಜ, ಭಾಸ್ಕರ, ಎಸ್‍ಡಿಎಂಸಿ ಅಧ್ಯಕ್ಷ ಅಬ್ಬಾಯ್ಯ, ಶೇಖರ, ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.