ADVERTISEMENT

ನ್ಯೂ ಕನ್ನಡ ಶಾಲೆಯ ವಿದ್ಯಾರ್ಥಿಗಳಿಂದ ಗುರುವಂದನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 4:24 IST
Last Updated 5 ಡಿಸೆಂಬರ್ 2022, 4:24 IST
ಯಾದಗಿರಿಯ ನ್ಯೂ ಕನ್ನಡ ಪ್ರೌಢಶಾಲೆಯ 1991------–92 ಸಾಲಿನ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕಿ ಅಕ್ಕನಾಗಮ್ಮ ಅವರನ್ನು ಸನ್ಮಾನಿಸಿದರು
ಯಾದಗಿರಿಯ ನ್ಯೂ ಕನ್ನಡ ಪ್ರೌಢಶಾಲೆಯ 1991------–92 ಸಾಲಿನ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕಿ ಅಕ್ಕನಾಗಮ್ಮ ಅವರನ್ನು ಸನ್ಮಾನಿಸಿದರು   

ಯಾದಗಿರಿ: ನಗರದ ಚಂದ್ರಶೇಖರ ವಿದ್ಯಾಸಂಸ್ಥೆಯ ನ್ಯೂ ಕನ್ನಡ ಪ್ರೌಢಶಾಲೆಯ 1991-92 ನೇ ಬ್ಯಾಚ್‌ನ ವಿದ್ಯಾರ್ಥಿಗಳಿಂದ ಈಚೆಗೆ ಗುರುವಂದನಾ ಕಾರ್ಯಕ್ರಮ ನಗರ ಹೊರವಲಯದ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಂಸ್ಥೆಯ ಕಾರ್ಯದರ್ಶಿ ಸಿದ್ರಾಮಪ್ಪ ಪಾಟೀಲ ಚೇಗುಂಟಾ ಮಾತನಾಡಿ, ಸಂಸ್ಥೆಗೆ ಕೀರ್ತಿ ತಂಡ ಶಿಷ್ಯವೃಂದಕ್ಕೆ ಶ್ಲಾಘಿಸಿ, ಇಂತಹ ಕಾರ್ಯಕ್ರಮಗಳು ಅವಿಸ್ಮರಣೀಯ ಎಂದರು.

ನಿವೃತ್ತ ಶಿಕ್ಷಕರಾದ ಎಚ್. ಎಸ್. ಬಿರಾದರ್ ಮಾತನಾಡಿ, ಮೂರು ದಶಕಗಳ ಹಿಂದಿನ ಘಟನೆಗಳ ಮೆಲುಕು ಹಾಕಿದರು.

ADVERTISEMENT

ಬರೋಬ್ಬರಿ ಮೂರು ದಶಕಗಳ ಹಿಂದೆ, ಪ್ರೌಢಶಾಲೆಯಲ್ಲಿ ಅಕ್ಷರ ಕಲಿಸಿದ ಗುರುಗಳು ಹಾಗೂ ಕಲಿತ ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಸಮ್ಮಿಲನ ಸಂಭ್ರಮಕ್ಕೆ, ಹಳೆಯ ನೆನಪುಗಳ ಮರುಕಳಿಸುವಿಕೆಗೆ ಕಾರಣವಾಗಿತ್ತು. ಅಂದಿನ ಶಿಕ್ಷಕರ ವೃಂದದ ಬಹುತೇಕ ಗುರುಗಳು ಹಾಗೂ ಮುಂಬೈ, ಬೆಂಗಳೂರು, ಹೈದರಾಬಾದ್ ಸೇರಿದಂತೆ ರಾಜ್ಯ ಹಾಗೂ ದೇಶದ ವಿವಿಧೆಡೆ ವಾಸಿಸುತ್ತಿರುವ ಹಳೆಯ ವಿದ್ಯಾರ್ಥಿಗಳು ಅಲ್ಲಿ ಸೇರಿದ್ದರು.

ನಿವೃತ್ತ ಶಿಕ್ಷಕರಾದ ಚಂದ್ರಕಾಂತ ಲೇವಡಿ, ಮಹಾದೇವಪ್ಪ ಮುನಗಲ್, ನಾಗನಗೌಡ ಪಾಟೀಲ, ಸುರೇಂದ್ರನಾಥ್ ಕಡೇಚೂರು, ಶಿವಶಂಕರ ಪಾಟೀಲ, ಸದಾನಂದ ಪಾಟೀಲ, ವಿಜಯರಾವ್ ಕುಲಕರ್ಣಿ, ಮಲ್ಲಪ್ಪ ಮುಂಡ್ರಿಕೇರಿ, ಪರಿಮಳಾ ಜೋಶಿ, ಶೋಭಾ ಟಪಾಲ, ಅಕ್ಕನಾಗಮ್ಮ, ಜುಬೇದಾ ಬೇಗಂ, ರೋಹಿತ್ ಮಾತನಾಡಿದರು. ಕಾರ್ಯದರ್ಶಿ ಸೇರಿದಂತೆ ಅಂದಿನ ಎಲ್ಲ ಶಿಕ್ಷಕರು ಹಾಗೂ ಸಿಬ್ಬಂದಿ ಮಹಾದೇವ ಅವರನ್ನು ಸನ್ಮಾನಿಸಲಾಯಿತು.

ನರಸಿಂಗರಾವ್ ಕುಲಕರ್ಣಿ ಹಾಗೂ ಪರಿಮಳಾ ನಿರೂಪಿಸಿದರು. ಶಿವಶರಣಪ್ಪ ಬಿ. ನಾಯಕ ಸ್ವಾಗತಿಸಿ, ಮಲ್ಲಪ್ಪ ಮ್ಯಾಗೇರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.