ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಕಡೇಚೂರು– ಬಾಡಿಯಾಳ ಕೈಗಾರಿಕಾ ಪ್ರದೇಶ ಫಾರ್ಮ್ ಪಾರ್ಕ್ ಮರುಸ್ಥಾಪನೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.
ಯಾದಗಿರಿ ತಾಲ್ಲೂಕಿನ ಗುರುಮಠಕಲ್ ಮತಕ್ಷೇತ್ರದ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಫಾರ್ಮಾ ಪಾರ್ಕ್ ಪ್ರಸ್ತಾವನೆಯನ್ನು ಮೂಲಭೂತ ಸೌಕರ್ಯ ಇಲ್ಲವೆಂದು ಕೇಂದ್ರ ಸರ್ಕಾರವು ಪ್ರಸ್ತಾವನೆಯನ್ನು ತಿರಸ್ಕಾರ ಮಾಡಿದೆ. ಈ ವಿಷಯ ಶಾಸಕ ನಾಗನಗೌಡ ಗಮನಕ್ಕೆ ಬಂದ ಕೂಡಲೇ ಮಾಜಿ ಪ್ರಧಾನಿ ಎಚ್.ಡಿ.ದೇವಗೌಡ ಅವರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ದೇವೇಗೌಡರು ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಫಾರ್ಮಾ ಪಾರ್ಕ್ ಸ್ಥಾಪನೆ ಮಾಡುವಂತೆ ಕೇಂದ್ರ ಸಚಿವರಿಗೆ ಶಿಫಾರಸು ಮಾಡಬೇಕೆಂದು ಮನವಿ ಮಾಡಲಾಗಿತ್ತು.
ಮನವಿಗೆ ಸ್ಪಂದಿಸಿದ ಎಚ್.ಡಿ.ದೇವೇಗೌಡರು ತಕ್ಷಣವೇ ಕೇಂದ್ರ ಸಚಿವರಿಗೆ ಪತ್ರ ಹಾಗೂ ದೂರವಾಣಿ ಮೂಲಕ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಫಾರ್ಮ್ ಪಾರ್ಕ್ ಸ್ಥಾಪನೆ ಮಾಡುವಂತೆ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.