ADVERTISEMENT

ಯಾದಗಿರಿ: ಆರೋಗ್ಯ ತಪಾಸಣೆ ಶಿಬಿರ ಜ.18ರಂದು

ಸಪ್ತಗಿರಿ ಆಸ್ಪತ್ರೆ, ಸಿದ್ದಿವಿನಾಯಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ತಪಾಸಣೆ: ಡಾ.ಮಹೇಶರೆಡ್ಡಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 16:28 IST
Last Updated 16 ಜನವರಿ 2021, 16:28 IST
ಡಾ.ಮಹೇಶರೆಡ್ಡಿ
ಡಾ.ಮಹೇಶರೆಡ್ಡಿ   

ಯಾದಗಿರಿ: ನಗರದ ಟ್ಯಾಂಕ್ ಬಂಡ್ ಹತ್ತಿರದಲ್ಲಿರುವ ಸಿದ್ಧಿವಿನಾಯಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.18ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವೆರೆಗೆ ಹೃದಯ ರೋಗ, ನರರೋಗ, ಮೂತ್ರಪಿಂಡ ಹಾಗೂ ಕ್ಯಾನ್ಸರ್ ರೋಗಿಗಳ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಮಹೇಶರೆಡ್ಡಿ ತಿಳಿಸಿದರು.

ಬೆಂಗಳೂರು ಸಪ್ತಗಿರಿ ಆಸ್ಪತ್ರೆ ಹಾಗೂ ಸಿದ್ಧಿವಿನಾಯಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ನಡೆಯುವ ಶಿಬಿರದಲ್ಲಿ ಬೆಂಗಳೂರಿನ ವೈದ್ಯರು ತಪಾಸಣೆ ನಡೆಸಲಿದ್ದು, ಅಗತ್ಯವಿದ್ದಲ್ಲಿ ಶಸ್ತ್ರ ಚಿಕಿತ್ಸೆಗೆ ಶಿಫಾರಸು ಮಾಡಲಾಗುವುದು.ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಬಿಪಿ, ಇಸಿ, 2ಡಿ ಎಕೋ ಸ್ಕ್ಯಾನಿಂಗ್‌ ಮಾಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೃದಯ, ನರ, ಕಿಡ್ನಿ ಕಲ್ಲುಗಳ ಸಮಸ್ಯೆಗೆ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್‌ದಾರರಿಗೆ ಉಚಿತವಾಗಿ ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರು ಸಪ್ತಗಿರಿ ಆಸ್ಪತ್ರೆಯಲ್ಲಿ ನಡೆಸಲಾಗುವುದು.ಮಾಹಿತಿಗೆ ಮೊ: 96110 61234 ಗೆ ಸಂಪರ್ಕಿಸಬಹುದು’ ಎಂದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಸಪ್ತಗಿರಿ ಆಸ್ಪತ್ರೆಯ ವ್ಯವಸ್ಥಾಪಕ ರಾಜೇಶ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.